
ಧಾರವಾಡ 15 : ಹುಬ್ಬಳ್ಳಿ ಧಾರವಾಡ ಕಾರಿಡಾರನಲ್ಲಿ ಇ.ಆರ್ಟಿ (ಎಲೆಕ್ಟ್ರಿಕ್ ರ್ಯಾಪಿಡ್ ಟ್ರಾನ್ಸಿಟ್) ವ್ಯವಸ್ಥೆಯ ಕುರಿತು ಸಾರ್ವಜನಿಕರು ಮತ್ತು ಭಾಗೀದಾರರ ಸಮಾಲೋಚನಾ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರ ಅಧ್ಯಕ್ಷತೆಯಲ್ಲಿ ಜೂನ್ 16, 2025 ರಂದು ಮಧ್ಯಾಹ್ನ 3 ಗಂಟೆಗೆ ಕೆ.ಸಿ.ಡಿ. ಕಾಲೇಜಿನ ಹಿಂಭಾಗದಲ್ಲಿರುವ ಡಾ. ಅಣ್ಣಾಜಿರಾವ್ ಶಿರೂರ ರಂಗಮಂದಿರ (ಸ್ಯಜನಾ)ದಲ್ಲಿ ಆಯೋಜಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.