ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆ 

ಧಾರವಾಡ  31 : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಖಾಯಂ ಜನತಾ ನ್ಯಾಯಾಲಯ, ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆಯ ಅಂಗವಾಗಿ ಸಿವಿಲ್ ನ್ಯಾಯಾಲಯಗಳ ಆವರಣದ ಸ್ವಚ್ಛತಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಧಾರವಾಡ ಖಾಯಂ ಜನತಾ ನ್ಯಾಯಾಲಯದ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷ  ನಾಗರಾಜಪ್ಪ ಎ.ಕೆ., ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಸದಸ್ಯ ಕಾರ್ಯದರ್ಶಿ ಪರಶುರಾಮ ಎಫ್. ದೊಡ್ಡಮ ಹಾಗೂ ಸಿಬ್ಬಂದಿಯವರು, ಖಾಯಂ ಜನತಾ ನ್ಯಾಯಾಲಯದ ಸದಸ್ಯರು ಮತ್ತು ಸಿಬ್ಬಂದಿಯವರು, ಮುಖ್ಯ ಕಾನೂನು ಅಭಿರಕ್ಷಕರ ಕಛೇರಿಯ ನ್ಯಾಯವಾದಿಗಳು ಹಾಗೂ ಸಿಬ್ಬಂದಿಯವರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
  • Related Posts

    ಮಾರುಕಟ್ಟೆಯ ಹಮಾಲರ ಸಂಘದಿಂದ ಮುರುಘಮಠಕ್ಕೆ ಕ್ವೀಂಟಲ್ ಬೆಲ್ಲ ಪ್ರಸಾದ

    ಶ್ರೀ ಮಧತನಿ ಮುರುಗೇಂದ್ರ ಮಹಾಶಿವಯೋಗಿಗಳ ಜಾತ್ರಾಮಹೋತ್ಸವದ ಅಂಗವಾಗಿ ಧಾರವಾಡದ ಮೃತ್ಯುಂಜಯ ಮಾರುಕಟ್ಟೆಯ ಹಮಾಲರ ಸಂಘದಿಂದ, ಹಣ್ಣೊಂದು ಕ್ವೀಂಟಲ್ ಬೆಲ್ಲವನ್ನು ಪ್ರಸಾದಕ್ಕೆ ನೀಡಿದರು. ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮುಖಾಂತರ ಎ ಪಿ ಎಮ್ ಸಿ ಇಂದ ಶ್ರೀ ಮುರುಘಮಠಕ್ಕೆ ನೀಡಿದರು. ಈ ಸಂದರ್ಭದಲ್ಲಿ…

    ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವಾರ್ಷಿಕ ಸಾಮಾನ್ಯ ಸಭೆ

    ಧಾರವಾಡ 01: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಧಾರವಾಡ ಶಾಖೆಯ 2024 2025 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯನ್ನು ಮಂಗಳವಾರ, ದಿ 04 ರಂದು ಮುಂಜಾನೆ 10:30 ಗಂಟೆಗೆ ಕನ್ನಡ ಕುಲಪುರೋಹಿತ ಆಲೂರು ವಂಕಟರಾವ ಸಾಂಸ್ಕೃತಿಕ ಭವನದಲ್ಲಿ  ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ…

    RSS
    Follow by Email
    Telegram
    WhatsApp
    URL has been copied successfully!