ಧಾರವಾಡ 17 : ನಗರದ ಸಿವಿಲ್ ಕೋರ್ಟ್ನಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್ನ ವೇಳೆ ಅಸಲು ದಾವೆ ಕೇಸೊಂದಕ್ಕೆ ಸಂಬಂಧಿಸಿದಂತೆ ಕಕ್ಷಿದಾರರ ಬಳಿಯೇ ತೆರಳಿ ರಾಜೀ ಸಂಧಾನ ಮಾಡಿಸಿ ಮಾನವೀಯತೆ ನ್ಯಾಯಾಧೀಶರು ಮೆರೆದಿದ್ದಾರೆ.
89 ವರ್ಷ ವಯಸ್ಸಿನ ಕಕ್ಷಿದಾರ ಮಹಿಳೆ ಕೋರ್ಟ್ ಒಳಗಡೆ ಬರಲಾರದ ಅಸಹಾಯಕ ಸ್ಥಿತಿಯಲ್ಲಿರುವುದನ್ನು ಪರಿಗಣಿಸಿ ನ್ಯಾಯಾಧೀಶರಾದ ಗಿರೀಶ ಆರ್ .ಬಿ.ಅವರು ಕೋರ್ಟ್ನಿಂದ ಹೊರಬಂದು ಆ ಮಹಿಳೆ ಇರುವಲ್ಲಿಯೇ ಬಂದು ಆಕೆಯ ಹೇಳಿಕೆಗಳನ್ನು ಪಡೆದು ರಾಜೀ ಸಂಧಾನ ಮಾಡಿಸಿ ಮಾನವೀಯತೆ ಮೆರೆದಿದ್ದಾರೆ. ನ್ಯಾಯಾಧೀಶರ ಈ ಮಾನವೀಯ ಕಳಕಳಿಗೆ ನೆರೆದಿದ್ದವರೆಲ್ಲ ಮೆಚ್ಚುಗೆ ವ್ಯಕ್ತಪಡಿಸಿದ್ದು ವಿಶೇಷವಾಗಿತ್ತು . ಪ್ರಕರಣದ ವಾದಿ ಪರವಾಗಿ ವಕೀಲರಾದ ಎಸ್.ಎಚ್.ಬಳಗನ್ನವರ ಹಾಗೂ ಪ್ರತಿವಾದಿ ಪರ ವಕೀಲರಾದ ಶಕ್ತಿ ಹಿರೇಮಠ ವಕಾಲತ್ತು ವಹಿಸಿದ್ದರು.
ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಗೆ ಬಂದು ಏಕಾಗ್ರತೆಯಿಂದ ಓದಬೇಕು ಡಾ.ಆನಂದ ಪಾಂಡುರಂಗಿ
ಧಾರವಾಡ : ವ್ಯಕ್ತಿತ್ವ ವಿಕಸನಕ್ಕೆ ಬೇಕಾಗಿರುವ ಎಲ್ಲಾ ಚಟುವಟಿಕೆಗಳನ್ನು ಒದಗಿಸಿದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ಕಲಿಕೆ ನಿರಂತರವಾದ ಪ್ರಕ್ರಿಯೆ ವಿದ್ಯಾರ್ಥಿಗಳಿಗೆ ಗುರಿಬೇಕು ಕಾರ್ಯ ಯೋಜನೆ ಮಾಡಿಕೊಳ್ಳಬೇಕು ಸ್ಪಷ್ಟವಾದ ಗುರಿಯನ್ನು ಇಟ್ಟುಕೊಂಡು ಅಭ್ಯಾಸವನ್ನು ಆನಂದಿಸು, ಪರೀಕ್ಷೆಯನ್ನು ಆನಂದಿಸಿ ಬರುವ ಹೆಚ್ಚು ಕಮ್ಮಿ ಅಂಕಗಳು ಬಂದರು…