ಉ.ಕ ಭಾಗದ ಉದ್ಯೋಗಾbಕಾಂಕ್ಷಿಗಳ ಕನಸಿಗೆ ವೇದಿಕೆ ಕಲ್ಪಿಸಿದ ಅರವಿಂದ ಬೆಲ್ಲದ

ಧಾರವಾಡ : ಶಾಸಕರಾದ ಅರವಿಂದ ಬೆಲ್ಲದ ಅವರ ನೇತೃತ್ವದಲ್ಲಿ, ಬಿಜೆಪಿ ಕಾರ್ಯಕರ್ತರು‌ ಸಹಯೋಗದೊಂದಿಗೆ ನಿನ್ನೆ ಧಾರವಾಡದ ಕೆ ಎಲ್ ಇ ಸಂಸ್ಥೆಯ ಶ್ರೀ ಮೃತ್ಯುಂಜಯ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಉದ್ಯೋಗ ಮೇಳವು ಯಶಸ್ವಿಯಾಗಿ ಸಮಾರೋಪಗೊಂಡಿತು.

ಈ ಉದ್ಯೋಗ ಮೇಳವನ್ನು ಶಾಸಕರಾದ ಅರವಿಂದ ಬೆಲ್ಲದ ಅವರು ಉದ್ಘಾಟಿಸಿ ಮಾತನಾಡಿ ” ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸರ್ಕಾರಿ ಹುದ್ದೆಗಳ ಭರ್ತಿ ಪ್ರಕ್ರಿಯೆಗೆ ಗ್ರಹಣ ಹಿಡಿದಿದೆ. ಅಲ್ಲದೇ, ನೇಮಕಾತಿಗಳೂ ವಿನಾಕಾರಣ ವಿಳಂಬಗೊಳ್ಳುತ್ತಿವೆ. ಆಯ್ಕೆ ಪರೀಕ್ಷೆ ನಡೆಸುವಲ್ಲಿಯೂ ನಿರ್ಲಕ್ಷ್ಯತನ ತೋರುತ್ತಿರುವುದರಿಂದ, ನಡೆದ ಪರೀಕ್ಷೆಗಳಲ್ಲಿಯೂ ಎಡವಟ್ಟುಗಳಾಗಿ, ಅರ್ಹ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದರು.

ಈ ಹಿನ್ನೆಲೆಯಲ್ಲಿ ನಿರುದ್ಯೋಗ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ, ಉತ್ತರ ಕರ್ನಾಟಕದ ಉದ್ಯೋಗಾಕಾಂಕ್ಷಿ ಯುವಜನತೆಗೆ ಪಾರದರ್ಶಕ ಹಾಗೂ ಪಕ್ಷಪಾತವಿಲ್ಲದ ಸೂಕ್ತ ವೇದಿಕೆಯನ್ನು ಸ್ಥಾಪಿಸುವ ನಮ್ಮ ಪ್ರಯತ್ನಕ್ಕೆ ಈ ಬೃಹತ್ ಉದ್ಯೋಗ ಮೇಳ ಮುನ್ನುಡಿಯಾಗಿದೆ.‌ ಸ್ವಾಮಿ ವಿವೇಕಾನಂದರು ಹೇಳಿದಂತೆ, ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕಾಗಿ, ನಾವು ಯುವ ಸಮುದಾಯವನ್ನು ಸದೃಢಗೊಳಿಸಬೇಕಿದೆ” ಎಂದರು. ಅಲ್ಲದೇ, ಈ ಉದ್ಯೋಗಮೇಳದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭ ಹಾರೈಸಿದರು.

ಉದ್ಯೋಗ ಮೇಳದಲ್ಲಿ ಪಾಲ್ಗೊಂಡಿದ್ದ 67 ಕ್ಕೂ ಅಧಿಕ ಕಂಪನಿಗಳು, 2890 ಉದ್ಯೋಗಾಕಾಂಕ್ಷಿಗಳನ್ನು ಸಂದರ್ಶನ ನಡೆಸಿದವು. ಇದರಲ್ಲಿ 1035 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.

  • Related Posts

    ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಗೆ ಬಂದು ಏಕಾಗ್ರತೆಯಿಂದ ಓದಬೇಕು ಡಾ.ಆನಂದ ಪಾಂಡುರಂಗಿ

    ಧಾರವಾಡ : ವ್ಯಕ್ತಿತ್ವ ವಿಕಸನಕ್ಕೆ ಬೇಕಾಗಿರುವ ಎಲ್ಲಾ ಚಟುವಟಿಕೆಗಳನ್ನು ಒದಗಿಸಿದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ಕಲಿಕೆ ನಿರಂತರವಾದ ಪ್ರಕ್ರಿಯೆ ವಿದ್ಯಾರ್ಥಿಗಳಿಗೆ ಗುರಿಬೇಕು ಕಾರ್ಯ ಯೋಜನೆ ಮಾಡಿಕೊಳ್ಳಬೇಕು ಸ್ಪಷ್ಟವಾದ ಗುರಿಯನ್ನು ಇಟ್ಟುಕೊಂಡು ಅಭ್ಯಾಸವನ್ನು ಆನಂದಿಸು, ಪರೀಕ್ಷೆಯನ್ನು ಆನಂದಿಸಿ ಬರುವ ಹೆಚ್ಚು ಕಮ್ಮಿ ಅಂಕಗಳು ಬಂದರು…

    ಪ್ರಥಮ ಕಿತ್ತೂರು ಕರ್ನಾಟಕ ಜಾಂಬೋರೇಟ್ ವ್ಯವಸ್ಥಿತವಾಗಿ ನಡೆಸಿ ಯಶಸ್ವಿಗೊಳಿಸಿ – ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಕರೆ

    ಧಾರವಾಡ ೦೫ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಧಾರವಾಡದ ವತಿಯಿಂದ ಇದೇ ದಿ.6 ರಿಂದ 10 ರವರೆಗೆ ಧಾರವಾಡ ತಾಲೂಕಿನ ದಡ್ಡಿಕಮಲಾಪೂರದ ಸಸ್ಯಚೇತನ ಜಿಲ್ಲಾ ತರಬೇತಿ ಕೇಂದ್ರದಲ್ಲಿ ನಡೆಯಲಿರುವ ವಿಭಾಗ ಮಟ್ಟದ ಪ್ರಥಮ ಕಿತ್ತೂರು ಕರ್ನಾಟಕ…

    RSS
    Follow by Email
    Telegram
    WhatsApp
    URL has been copied successfully!