ಅಂಗಡಿಗೆ ನುಗ್ಗಿ ದರೋಡೆ ಮಾಡಿದ್ದ 6 ಆರೋಪಿಗಳ ಬಂಧನ

ಹುಬ್ಬಳ್ಳಿ : ಹುಬ್ಬಳ್ಳಿ ಶಹರ ಪೊಲೀಸ್ ಠಾಣೆ ವ್ಯಾಪ್ತಿಯ ಚಂದ್ರಕಲಾ ಟಾಕೀಸ್ ಹತ್ತಿರದ ಚಿಕನ್ ಪೌಲ್ಟ್ರಿ ಅಂಗಡಿಗೆ ನುಗ್ಗಿ ಅಂಗಡಿಯಲ್ಲಿದ್ದ ದೂರುದಾರರಿಗೆ ಚಾಕು ತೋರಿಸಿ ಹೆದರಿಸಿ ಅವರ ಬಳಿ ಇದ್ದ 5000/- ನಗದು ಹಣವನ್ನು ದರೋಡೆ ಮಾಡಿಕೊಂಡು ಹೋಗಿದ್ದರ ಬಗ್ಗೆ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸದರಿ ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚಲು ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ತಂಡವನ್ನು ರಚಿಸಲಾಗಿತ್ತು, ಸದರಿ ತಂಡವು ಆರೋಪಿಗಳ ಬಗ್ಗೆ ಮಾಹಿತಿಯನ್ನು ಕಲೆಹಾಕಿ ಆರೋಪಿತರಾದ ಮೊಹಮ್ಮದ್ ಫಹದ್ ಮಿಠಾಯಿಗಾರ್ ಅಯ್ಯು ಬೇಪಾರಿ, ಖಾಜಾ ಭಾಷಾ ಮುಲ್ಲಾ, ಶಿವಾಜಿ ಮದ್ರಾಸಿ, ಮುಬಾರಕ್ ಮಂಚಿನಕೊಪ್ಪ ಅಬ್ಬು ಮನಿಯಾರ್ ಎಂಬ ಆರು ಜನ ಆರೋಪಿತರನ್ನು ಬಂಧಿಸಿದ್ದು, ಬಂಧಿತರಿಂದ ಕೃತಕ್ಕೆ ಬಳಸಿದ್ದ ಎರಡು ದ್ವಿಚಕ್ರ ವಾಹನ ಹಾಗೂ ಒಂದು ಚಾಕು,ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆದುಕೊಂಡು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ ಎಂದು ಪೋಲೀಸ ಆಯುಕ್ತ ಶಶಿಕುಮಾರ ಎನ್ ಹೇಳಿದರು.

  • Related Posts

    ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಗೆ ಬಂದು ಏಕಾಗ್ರತೆಯಿಂದ ಓದಬೇಕು ಡಾ.ಆನಂದ ಪಾಂಡುರಂಗಿ

    ಧಾರವಾಡ : ವ್ಯಕ್ತಿತ್ವ ವಿಕಸನಕ್ಕೆ ಬೇಕಾಗಿರುವ ಎಲ್ಲಾ ಚಟುವಟಿಕೆಗಳನ್ನು ಒದಗಿಸಿದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ಕಲಿಕೆ ನಿರಂತರವಾದ ಪ್ರಕ್ರಿಯೆ ವಿದ್ಯಾರ್ಥಿಗಳಿಗೆ ಗುರಿಬೇಕು ಕಾರ್ಯ ಯೋಜನೆ ಮಾಡಿಕೊಳ್ಳಬೇಕು ಸ್ಪಷ್ಟವಾದ ಗುರಿಯನ್ನು ಇಟ್ಟುಕೊಂಡು ಅಭ್ಯಾಸವನ್ನು ಆನಂದಿಸು, ಪರೀಕ್ಷೆಯನ್ನು ಆನಂದಿಸಿ ಬರುವ ಹೆಚ್ಚು ಕಮ್ಮಿ ಅಂಕಗಳು ಬಂದರು…

    ಪ್ರಥಮ ಕಿತ್ತೂರು ಕರ್ನಾಟಕ ಜಾಂಬೋರೇಟ್ ವ್ಯವಸ್ಥಿತವಾಗಿ ನಡೆಸಿ ಯಶಸ್ವಿಗೊಳಿಸಿ – ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಕರೆ

    ಧಾರವಾಡ ೦೫ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಧಾರವಾಡದ ವತಿಯಿಂದ ಇದೇ ದಿ.6 ರಿಂದ 10 ರವರೆಗೆ ಧಾರವಾಡ ತಾಲೂಕಿನ ದಡ್ಡಿಕಮಲಾಪೂರದ ಸಸ್ಯಚೇತನ ಜಿಲ್ಲಾ ತರಬೇತಿ ಕೇಂದ್ರದಲ್ಲಿ ನಡೆಯಲಿರುವ ವಿಭಾಗ ಮಟ್ಟದ ಪ್ರಥಮ ಕಿತ್ತೂರು ಕರ್ನಾಟಕ…

    RSS
    Follow by Email
    Telegram
    WhatsApp
    URL has been copied successfully!