ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ: ಅಭೂತಪೂರ್ವ ಯಶಸ್ಸು

ಹೊಸ ಒಳನೋಟಗಳನ್ನು ತೆರೆದಿಟ್ಟ ತಜ್ಞರು

ಧಾರವಾಡ 16 : ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಧಾರವಾಡ ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಬುದ್ಧ, ಬಸವ ಮತ್ತು ಅಂಬೇಡ್ಕರ: ಹೊಸ ದೃಷ್ಟಿಕೋನ ಕುರಿತು ಒಂದು ದಿನದ ವಿಚಾರ ಸಂಕಿರಣ ಅಭೂತಪೂರ್ವ ಯಶಸ್ಸು ಕಂಡಿತು.

ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ವಿಚಾರ ಸಂಕಿರಣವನ್ನು ಉದ್ಘಾಟನೆ ಮಾಡಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ವಿವಿಧ ಗೋಷ್ಠಿಗಳು ಬುದ್ಧನ ಅಷ್ಟಾಂಗ ಮಾರ್ಗ- ಒಂದು ವೈಜ್ಞಾನಿಕ ನೋಟ, ಬುದ್ಧನ ಬೋಧನೆಗಳಲ್ಲಿ ಮಹಿಳೆಯರ ಸ್ಥಾನಮಾನ, ಪ್ರಚಲಿತ ವಿಶ್ವದಲ್ಲಿ ಬೌದ್ಧಧರ್ಮದ ಪ್ರಸ್ತುತತೆ, ಶರಣರ ಷಟ್‌ಸ್ಥಳ, ಒಂದು ವೈಜ್ಞಾನಿಕ ನೋಟ, ಸಮಾನತೆ ಮತ್ತು ಅಂತರ್ಜಾತಿ ವಿವಾಹ- ಬಸವಣ್ಣನ ಉತ್ತುಂಗ ಸಾಧನೆ, ಕಾಯಕ ಮತ್ತು ದಾಸೋಹ ಸಾಮಾಜಿಕ ನ್ಯಾಯದ ಶ್ರೇಷ್ಠ ಪರಿಕಲ್ಪನೆ, ಅಂಬೇಡ್ಕರ್‌ ಸಮಾನತೆ ಮತ್ತು ಭಾರತದ ಸಂವಿಧಾನ, ಜಾತಿ ವಿನಾಶ ಮತ್ತು ಅಂಬೇಡ್ಕರ, ಅಂಬೇಡ್ಕರ್‌ ಮತಾಂತರ ಮತ್ತು ಅದರ ಪರಿಣಾಮಗಳು ಕುರಿತು ಗೋಷ್ಠಿಗಳು ನಡೆದವು.

ಈ ಎಲ್ಲಾ ವಿಷಯಗಳ ಕುರಿತು ತಜ್ಞರು, ವಿವಿಧ ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರು, ವೈದ್ಯಕೀಯ ಕ್ಷೇತ್ರದ ತಜ್ಞರು, ಲೇಖಕರು, ಸಾಹಿತಿಗಳು, ಚಿಂತಕರು ಮಾತನಾಡಿದರು.

ದಿವ್ಯಸಾನಿಧ್ಯವನ್ನು ಬಾಗಲಕೋಟೆ ಹಾಗೂ ಚಿತ್ರದುರ್ಗದ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ ಬೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮೀಜಿ ಹಾಗೂ ಹಲವು ಸ್ವಾಮೀಜಿಗಳು, ಮೌಲ್ವಿಗಳು, ಧಾರ್ಮಿಕ ಮುಖಂಡರು ವಹಿಸಿದ್ದರು.

ಸಮಾರೋಪ ಸಮಾರಂಭ ಸಂಜೆ ನಡೆದ ಸಮಾರಂಭದಲ್ಲಿ ವಿವಿಧ ಮಠಾಧೀಶರು ಉಪಸ್ಥಿತರಿದ್ದು ಮಾತನಾಡಿದರು. ಸಚಿವ ಸಂತೋಷ್‌ ಲಾಡ್‌ ಅವರು, ಧನ್ಯವಾದಗಳನ್ನು ಸಮರ್ಪಿಸಿದರು.