ಧಾರವಾಡ 17 :ದಿನಾಂಕ 16.6.2025 ರಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕುಮಾರೇಶ್ವರನಗರ ಧಾರವಾಡ ಇಲ್ಲಿ ಏಷ್ಯಾದ ಡೆವಲಪ್ಮೆಂಟ್ ಬ್ಯಾಂಕ್ ವತಿಯಿಂದ ನಿಯೋಗವು ಭೇಟಿ ನೀಡಿದ್ದು ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸಂತೋಷ್ ಲಾಡ್ ಅವರು ನಿಯೋಗದೊಂದಿಗೆ ಕಾಲೇಜಿನ ಅಭಿವೃದ್ಧಿಯ ಬಗ್ಗೆ ಚರ್ಚಿಸಿದರು. ಸಚಿವರಾದ ಶ್ರೀ ಸಂತೋಷ್ ಲಾರ್ಡ ಅವರು ಉತ್ತರ ಕರ್ನಾಟಕ ಭಾಗದಲ್ಲಿ ಶಿಕ್ಷಣಕ್ಕೆ ಇನ್ನೂ ಹೆಚ್ಚಿನ ಪ್ರೋತ್ಸಾಹದ ಅವಶ್ಯಕತೆ ಇದೆ. ಈ ಭಾಗದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಧಾರವಾಡ ಒಂದು ದೊಡ್ಡ ಶಿಕ್ಷಣ ಸಂಸ್ಥೆಯಾಗಿದ್ದು.

ಇಲ್ಲಿ 4,600 ಜನ ವಿದ್ಯಾರ್ಥಿಗಳು ಓದುತ್ತಿದ್ದಾರೆ ಆದರೆ ಇಲ್ಲಿ ಮೂಲ ಸೌಕರ್ಯಗಳ ಕೊರತೆ ಇದೆ. ಆದ್ದರಿಂದ ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ ಸಹಯೋಗದಲ್ಲಿ ಈ ಭಾಗದಲ್ಲಿ ಶಿಕ್ಷಣವನ್ನು ಬಲಪಡಿಸಬೇಕು ಎಂದು ಅಭಿಪ್ರಾಯಪಟ್ಟರು.

ಏಷಿಯನ್ ಡೆವಲಪ್ಮೆಂಟ್ ಬ್ಯಾಂಕ್ ನಿಯೋಗವು ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಹಳೆಯ ವಿದ್ಯಾರ್ಥಿಗಳೊಂದಿಗೆ ಪಾಲಕರೊಂದಿಗೆ ಹುಬ್ಬಳ್ಳಿ ಧಾರವಾಡದ ಉದ್ಯಮ ಪ್ರತಿನಿಧಿಗಳೊಂದಿಗೆ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರೊಂದಿಗೆ ಹಾಗೂ ಕಾಲೇಜಿನ ಸಿಬ್ಬಂದಿಯೊಂದಿಗೆ ಕಾಲೇಜಿನ ಸಮಗ್ರ ಅಭಿವೃದ್ಧಿಯ ಬಗ್ಗೆ ಹಾಗೂ ಅದಕ್ಕಿರುವ ಅವಶ್ಯಕತೆಗಳ ಬಗ್ಗೆ ಚರ್ಚಿಸಿತು. ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕರಾದ ಪ್ರೊಫೆಸರ್ ಶೋಭಾ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ನಳಿನಿ ಬೆಂಗೇರಿ ಅವರು ಕಾಲೇಜಿನ ಸಮಗ್ರ ಚಿತ್ರಣವನ್ನು ಪ್ರಸ್ತುತಪಡಿಸಿದರು. ಪ್ರೊಫೆಸರ್ ಜಿಕೆ ಬಡಿಗೇರವರು ನಿಯೋಗವನ್ನು ಹಾಗೂ ಆಮಂತ್ರತರನ್ನು ಸ್ವಾಗತಿಸಿದರು. ಡಾಕ್ಟರ್ ಸಾಗರ್ ಮನಗವಿಯವರು ವಂದಿಸಿದರು.

ಡಾ. ಬಸವರಾಜೇಶ್ವರಿ ಪಾಟೀಲ್ ಐ ಕೆ ಎ ಸಿ ಸಂಯೋಜಕರು ಕಾರ್ಯಕ್ರಮವನ್ನು ನಿರೂಪಿಸಿದರು. ಕಾಲೇಜಿನ ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಶ್ರೀ. ಇಬ್ರಾಹಿಂ ಸಾಗರ್. ಪ್ರಾಧ್ಯಾಪಕರಾದ ಶ್ರೀ ಏ ಕೆ. ಜಮಾದಾರ್, ಪ್ರೊಫೆಸರ್ ಬಸವರಾಜ್ ತಲ್ಲೂರ್, ಡಾಕ್ಟರ್ ಸರಸ್ವತಿ ಪಾಟೀಲ್, ಬಿ ಎಸ್ ಪಾಟೀಲ್, ಡಾ. ಸಿವಿ ಮರಿದೇವರ ಮಠ ಹಾಗೂ ಕಾಲೇಜಿನ ಸಮಸ್ತ ಪ್ರಾಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.