ಧಾರವಾಡ ರಂಗಾಯಣ ಜನವರಿ 4 ರಿಂದ 7 ರವರೆಗೆ ರಂಗಾಯಣ ನಾಟಕೋತ್ಸವ

ಧಾರವಾಡ  ಜನವರಿ ೦೩ : ಧಾರವಾಡ ರಂಗಾಯಣವು ರಂಗ ತಂಡಗಳ ಸಹಯೋಗದಲ್ಲಿ ನಾಟಕ ತರಬೇತಿ ಕಾರ್ಯಾಗಾರದಲ್ಲಿ ಸಿದ್ಧಗೊಂಡ ಹಾಗೂ ಸ್ಥಳೀಯ ತಂಡಗಳಿಂದ ಜ.4 ರಿಂದ 7 ರವರೆಗೆ ಸಂಜೆ 6 ಕ್ಕೆ ಪಂಡಿತ ಬಸವರಾಜ ರಾಜಗುರು ಬಯಲು ರಂಗಮಂದಿರದಲ್ಲಿ ರಂಗಾಯಣ ನಾಟಕೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.

ಅಪರ ಜಿಲ್ಲಾಧಿಕಾರಿ ಸಿ.ಡಿ ಗೀತಾ ಅವರು ನಾಟಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸುವರು. ರಂಗ ನಿರ್ದೇಶಕ ಹುಲುಗಪ್ಪ ಕಟ್ಟಿಮನಿ ಅವರು ಅತಿಥಿಗಳಾಗಿ ಭಾಗವಹಿಸುವರು. ರಂಗಾಯಣ ನಿರ್ದೇಶಕ ಡಾ.ರಾಜು ತಾಳಿಕೋಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಜನವರಿ 4 ರಂದು ಸಂಜೆ 6.30ಕ್ಕೆ ಅಂಗುಲಿಮಾಲ ದೊಡ್ಡಾಟ ಪ್ರಸಂಗವನ್ನು ಹುಬ್ಬಳ್ಳಿ ಜನಪದ ಕಲಾಬಳಗ ಟ್ರಸ್ಟ್(ರಿ), ಜನವರಿ 5 ರಂದು ಹೆತ್ತವಳ ಹಾಲು ವಿಷವಾಯಿತು ನಾಟಕವನ್ನು ಹುಬ್ಬಳ್ಳಿ ಕನ್ನಡ ಕಲಾ ಸೇವಾ ಸಂಘ(ರಿ), ಜನವರಿ 6 ರಂದು ಬಾಹುಬಲಿ ವಿಜಯ ನಾಟಕವನ್ನು ಧಾರವಾಡದ ಆಟ-ಮಾಟ ತಂಡ ಹಾಗೂ ಜನವರಿ 7 ರಂದು ಜೋಕುಮಾರ ಸ್ವಾಮಿ ನಾಟಕವನ್ನು ಶೂಲೇಬಾವಿ ಮನುಜಮತ ಫೌಂಡೇಶನ ತಂಡಗಳು ಪ್ರಸ್ತುತಪಡಿಸುವರು. ಹೆಚ್ಚಿನ ಸಂಖ್ಯೆಯಲ್ಲಿ ರಂಗಾಸಕ್ತರು, ಸಾಹಿತಿಗಳು ಆಗಮಿಸಬೇಕು ಎಂದು ರಂಗಾಯಣ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • Related Posts

    ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಗೆ ಬಂದು ಏಕಾಗ್ರತೆಯಿಂದ ಓದಬೇಕು ಡಾ.ಆನಂದ ಪಾಂಡುರಂಗಿ

    ಧಾರವಾಡ : ವ್ಯಕ್ತಿತ್ವ ವಿಕಸನಕ್ಕೆ ಬೇಕಾಗಿರುವ ಎಲ್ಲಾ ಚಟುವಟಿಕೆಗಳನ್ನು ಒದಗಿಸಿದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ಕಲಿಕೆ ನಿರಂತರವಾದ ಪ್ರಕ್ರಿಯೆ ವಿದ್ಯಾರ್ಥಿಗಳಿಗೆ ಗುರಿಬೇಕು ಕಾರ್ಯ ಯೋಜನೆ ಮಾಡಿಕೊಳ್ಳಬೇಕು ಸ್ಪಷ್ಟವಾದ ಗುರಿಯನ್ನು ಇಟ್ಟುಕೊಂಡು ಅಭ್ಯಾಸವನ್ನು ಆನಂದಿಸು, ಪರೀಕ್ಷೆಯನ್ನು ಆನಂದಿಸಿ ಬರುವ ಹೆಚ್ಚು ಕಮ್ಮಿ ಅಂಕಗಳು ಬಂದರು…

    ಪ್ರಥಮ ಕಿತ್ತೂರು ಕರ್ನಾಟಕ ಜಾಂಬೋರೇಟ್ ವ್ಯವಸ್ಥಿತವಾಗಿ ನಡೆಸಿ ಯಶಸ್ವಿಗೊಳಿಸಿ – ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಕರೆ

    ಧಾರವಾಡ ೦೫ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಧಾರವಾಡದ ವತಿಯಿಂದ ಇದೇ ದಿ.6 ರಿಂದ 10 ರವರೆಗೆ ಧಾರವಾಡ ತಾಲೂಕಿನ ದಡ್ಡಿಕಮಲಾಪೂರದ ಸಸ್ಯಚೇತನ ಜಿಲ್ಲಾ ತರಬೇತಿ ಕೇಂದ್ರದಲ್ಲಿ ನಡೆಯಲಿರುವ ವಿಭಾಗ ಮಟ್ಟದ ಪ್ರಥಮ ಕಿತ್ತೂರು ಕರ್ನಾಟಕ…

    RSS
    Follow by Email
    Telegram
    WhatsApp
    URL has been copied successfully!