ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಿ ಸಾಧನೆ ಮಾಡಿ – ಡಾ. ಡಿ. ವೀರೇಂದ್ರ ಹೆಗ್ಗಡೆ

ಧಾರವಾಡ 27 : ಇಂದಿನ ಕಂಪ್ಯೂಟರ್ ಯುಗದಲ್ಲಿ ಎಂ.ಸಿ.ಎ ಕಲಿತ ವಿದ್ಯಾರ್ಥಿಗಳಿಗೆ ಅತ್ಯಧಿಕ ಬೇಡಿಕೆ ಇದೆ. ಉದ್ಯೋಗಾಧಾರಿತ ಕೋರ್ಸು ಇದಾಗಿದ್ದು, ವಿದ್ಯಾರ್ಥಿಗಳು ಸತತ ಪ್ರಯತ್ನ, ಹೊಸ ವಿಚಾರಗಳ ಆವಿಷ್ಕಾರಗಳೊಂದಿಗೆ ತಮ್ಮ ಜಾಣ್ಮೆಯನ್ನು ತೋರಬೇಕಾದ ಅವಶ್ಯಕತೆ ಇದೆ. ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಸ್ಪರ್ಧೆಯ ಸವಾಲನ್ನು ಸ್ವೀಕರಿಸಲೇಬೇಕು. ಸ್ಪರ್ಧೆಯಲ್ಲಿ ಉಳಿಯಬೇಕಾದರೆ ದಿನದಿಂದ ದಿನಕ್ಕೆ ಬದಲಾಗುತ್ತಿರುವ ತಾಂತ್ರಿಕತೆಯ ಮಾಹಿತಿ ಇರಬೇಕಾದದ್ದು ಅವಶ್ಯಕ ಎಂದು ಜೆೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಎಂ.ಸಿ.ಎ ಪ್ರಥಮ ಬ್ಯಾಚ್‌ನ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಜೆ.ಎಸ್.ಎಸ್ ನ ಕಾರ್ಯಾಧ್ಯಕ್ಷರು ಧರ್ಮಸ್ಥಳ ಧರ್ಮಾಧಿಕಾರಿಗಳು ಆದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡುತ್ತಿದ್ದರು.

ಜೆಎಸ್.ಎಸ್ ನ ಉತ್ತಮ ಕಲಿಕಾ ವಾತಾವರಣದಲ್ಲಿ ಈ ಸಂಸ್ಥೆ ಕಾರ್ಯಾರಂಭ ಮಾಡಿದೆ. ಜಗತ್ತೇ ಈಗ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ನತ್ತ ಮುಖ ಮಾಡಿದೆ. ಈ ಸಂದರ್ಭದಲ್ಲಿ ತಮ್ಮ ವ್ಯಾಸಂಗದ ಜೊತೆ ಈ ಕೋರ್ಸಿನ ಮಾಹಿತಿಯನ್ನು ಪಡೆದುಕೊಳ್ಳಿ ಇದರಿಂದ ಮುಂದೆ ತಮಗೆ ಒಳ್ಳೆಯ ಉನ್ನತ ಉದ್ಯೋಗಾವಕಾಶಗಳು ದೊರೆಯಲಿವೆ ಜೀವನದಲ್ಲಿ ಬರುವ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಿ ಸಾಧನೆ ಮಾಡಿ ಎಂದು ಹಾರೈಸಿದರು.

ಎ.ಆಯ್.ಸಿ.ಟಿ ಅನುಮತಿಯೊಂದಿಗೆ ಈ ವರ್ಷ ಎಂ.ಸಿ.ಎ ಕೋರ್ಸನ್ನು ಆರಂಭಿಸಲಾಗಿದೆ. ನುರಿತ ಶಿಕ್ಷಕವರ್ಗ, ಅತ್ಯಾಧುನಿಕ ಕಂಪ್ಯೂಟರ್ ಲ್ಯಾಬ್‌ಗಳಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಈ ಪ್ರಥಮ ಬ್ಯಾಚಿನ ವಿದ್ಯಾರ್ಥಿಗಳಿಗೆ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ದೊರೆತಿದೆ. ಇದು ನಮ್ಮೆಲ್ಲರ ಸೌಭಾಗ್ಯವೇ ಸರಿ ಎಂದು ಜೆ.ಎಸ್.ಎಸ್ ನ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದರವರು ಅಭಿಪ್ರಾಯಪಟ್ಟರು.
ಎಂ.ಸಿ.ಎ ಕಾಲೇಜಿನ ನಿರ್ದೇಶಕರಾದ ಡಾ. ಸೂರಜ್ ಜೈನ್ ವಂದಿಸಿದರು.

ಇದೇ ಸಂದರ್ಭದಲ್ಲಿ ಎಂ.ಸಿ.ಎ ನ ವಿದ್ಯಾರ್ಥಿಗಳು, ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

  • Related Posts

    ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಗೆ ಬಂದು ಏಕಾಗ್ರತೆಯಿಂದ ಓದಬೇಕು ಡಾ.ಆನಂದ ಪಾಂಡುರಂಗಿ

    ಧಾರವಾಡ : ವ್ಯಕ್ತಿತ್ವ ವಿಕಸನಕ್ಕೆ ಬೇಕಾಗಿರುವ ಎಲ್ಲಾ ಚಟುವಟಿಕೆಗಳನ್ನು ಒದಗಿಸಿದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ಕಲಿಕೆ ನಿರಂತರವಾದ ಪ್ರಕ್ರಿಯೆ ವಿದ್ಯಾರ್ಥಿಗಳಿಗೆ ಗುರಿಬೇಕು ಕಾರ್ಯ ಯೋಜನೆ ಮಾಡಿಕೊಳ್ಳಬೇಕು ಸ್ಪಷ್ಟವಾದ ಗುರಿಯನ್ನು ಇಟ್ಟುಕೊಂಡು ಅಭ್ಯಾಸವನ್ನು ಆನಂದಿಸು, ಪರೀಕ್ಷೆಯನ್ನು ಆನಂದಿಸಿ ಬರುವ ಹೆಚ್ಚು ಕಮ್ಮಿ ಅಂಕಗಳು ಬಂದರು…

    ಪ್ರಥಮ ಕಿತ್ತೂರು ಕರ್ನಾಟಕ ಜಾಂಬೋರೇಟ್ ವ್ಯವಸ್ಥಿತವಾಗಿ ನಡೆಸಿ ಯಶಸ್ವಿಗೊಳಿಸಿ – ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಕರೆ

    ಧಾರವಾಡ ೦೫ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಧಾರವಾಡದ ವತಿಯಿಂದ ಇದೇ ದಿ.6 ರಿಂದ 10 ರವರೆಗೆ ಧಾರವಾಡ ತಾಲೂಕಿನ ದಡ್ಡಿಕಮಲಾಪೂರದ ಸಸ್ಯಚೇತನ ಜಿಲ್ಲಾ ತರಬೇತಿ ಕೇಂದ್ರದಲ್ಲಿ ನಡೆಯಲಿರುವ ವಿಭಾಗ ಮಟ್ಟದ ಪ್ರಥಮ ಕಿತ್ತೂರು ಕರ್ನಾಟಕ…

    RSS
    Follow by Email
    Telegram
    WhatsApp
    URL has been copied successfully!