ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿ ಬಿಜೆಪಿ ಸೇರಿದ್ದರು

ಬೆಂಗಳೂರು : ಕಳೆದ ಹಲವು ತಿಂಗಳಿಂದ ವಯೋಸಹಸ ಕಾಯಿಲೆಯಿಂದ ಬಳಲುತ್ತಿದ್ದ 93 ವರ್ಷದ ರಾಜ್ಯದ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ (93) (ಸೋಮನಹಳ್ಳಿ ಮಲ್ಲಯ್ಯ ಕೃಷ್ಣ) ವಿಧಿವಶರಾದರು.

ಅವರು ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ಮನೆಯಲ್ಲೇ ಕೊನೆಯುಸಿರು ಎಳೆದಿದ್ದು, ಹಲವು ದಶಕಗಳ ಕಾಲ ಸುದೀರ್ಘವಾಗಿ ರಾಜಕೀಯ ಜೀವನದಲ್ಲಿದ್ದ ಎಸ್.ಎಂ. ಕೃಷ್ಣ 1999 ರಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಪಾಂಚಜನ್ಯ ಯಾತ್ರೆ ಮಾಡುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದರು. ಆನಂತರ 2004ರಲ್ಲಿ ಮಹಾರಾಷ್ಟ್ರ ರಾಜ್ಯಪಾಲರಾಗಿ ನಿಯುಕ್ತಿಗೊಂಡಿದ್ದರು.

ನಂತರದ ಬೆಳವಣಿಗೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿ ಬಿಜೆಪಿ ಸೇರಿ, ಕೇಂದ್ರ ಸರಕಾರದಲ್ಲಿ ಸಚಿವರಾಗಿದ್ದರು. ತಮ್ಮ ಅಧಿಕಾರದ ಅವಧಿಯಲ್ಲಿ ಬೆಂಗಳೂರಿಗೆ ಜಾಗತಿಕ ಮನ್ನಣೆ ತಂದಿದ್ದ ಕೃಷ್ಣಅವರು ಬೆಂಗಳೂರು ಸಿಲಿಕಾನ್ ಸಿಟಿ ಆಗಿದ್ದನ್ನ ಇಲ್ಲಿ ಸ್ಮರಿಸಬಹುದು.

ಮಂಡ್ಯ ಜಿಲ್ಲೆಯ ಮದ್ದೂರಿನಿಂದ ಸತತವಾಗಿ ಹಲವು ಬಾರಿ ಶಾಸಕರಾಗಿ ರಾಜ್ಯದ ಗಮನ ಸೆಳೆದಿದ್ದ ಎಸ್.ಎಂ. ಕೃಷ್ಣ ನಿಧನದಿಂದ ಜಿಲ್ಲೆಯ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ.

  • Related Posts

    ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಗೆ ಬಂದು ಏಕಾಗ್ರತೆಯಿಂದ ಓದಬೇಕು ಡಾ.ಆನಂದ ಪಾಂಡುರಂಗಿ

    ಧಾರವಾಡ : ವ್ಯಕ್ತಿತ್ವ ವಿಕಸನಕ್ಕೆ ಬೇಕಾಗಿರುವ ಎಲ್ಲಾ ಚಟುವಟಿಕೆಗಳನ್ನು ಒದಗಿಸಿದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ಕಲಿಕೆ ನಿರಂತರವಾದ ಪ್ರಕ್ರಿಯೆ ವಿದ್ಯಾರ್ಥಿಗಳಿಗೆ ಗುರಿಬೇಕು ಕಾರ್ಯ ಯೋಜನೆ ಮಾಡಿಕೊಳ್ಳಬೇಕು ಸ್ಪಷ್ಟವಾದ ಗುರಿಯನ್ನು ಇಟ್ಟುಕೊಂಡು ಅಭ್ಯಾಸವನ್ನು ಆನಂದಿಸು, ಪರೀಕ್ಷೆಯನ್ನು ಆನಂದಿಸಿ ಬರುವ ಹೆಚ್ಚು ಕಮ್ಮಿ ಅಂಕಗಳು ಬಂದರು…

    ಪ್ರಥಮ ಕಿತ್ತೂರು ಕರ್ನಾಟಕ ಜಾಂಬೋರೇಟ್ ವ್ಯವಸ್ಥಿತವಾಗಿ ನಡೆಸಿ ಯಶಸ್ವಿಗೊಳಿಸಿ – ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಕರೆ

    ಧಾರವಾಡ ೦೫ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಧಾರವಾಡದ ವತಿಯಿಂದ ಇದೇ ದಿ.6 ರಿಂದ 10 ರವರೆಗೆ ಧಾರವಾಡ ತಾಲೂಕಿನ ದಡ್ಡಿಕಮಲಾಪೂರದ ಸಸ್ಯಚೇತನ ಜಿಲ್ಲಾ ತರಬೇತಿ ಕೇಂದ್ರದಲ್ಲಿ ನಡೆಯಲಿರುವ ವಿಭಾಗ ಮಟ್ಟದ ಪ್ರಥಮ ಕಿತ್ತೂರು ಕರ್ನಾಟಕ…

    RSS
    Follow by Email
    Telegram
    WhatsApp
    URL has been copied successfully!