ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ನುಡಿ ನಮನ

ಧಾರವಾಡ 29 : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ನುಡಿ ನಮನ ಸಲ್ಲಿಸಲಾಯಿತು. ನುಡಿ ನಮನ ಕಾರ್ಯಕ್ರಮದಲ್ಲಿ ಜಿಲ್ಲಾ ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ ಮಾತನಾಡಿ ಡಾ.‌ಮನಮೋಹನ ಸಿಂಗ್ ಅವರು ಒಳ್ಳೆಯ ಆಡಳಿತಗಾರ, ಮುತ್ಸದ್ಧಿ ರಾಜಕಾರಣಿಗಳು, ದೇಶವನ್ನು ಆರ್ಥಿಕ ಅಭಿವೃದ್ಧಿಯತ್ತ ಕೊಂಡೊಯ್ದ ಮಹಾನ ಅರ್ಥಶಾಸ್ತ್ರಜ್ಞ ಆಗಿದ್ದರು ಎಂದು ತಮ್ಮ ನುಡಿ ನಮನದಲ್ಲಿ ಬಣ್ಣಿಸಿದರು.

ಜಿಲ್ಲಾ ಕಸಾಪ ಹಾಗೂ ಧಾರವಾಡ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನುಡಿ ನಮನ ಕಾರ್ಯಕ್ರಮವನ್ನು ಏರ್ಪಡಿಸಿದ್ದವು. ತಾಲೂಕು ಅಧ್ಯಕ್ಷ ಮಹಾಂತೇಶ ನರೇಗಲ್, ಜಿಲ್ಲಾ ಕೋಶಾಧಿಕಾರಿ ಡಾ. ಎಸ್ ಎಸ್ ದೊಡಮನಿ, ಸಂಘಟನಾ ಕಾರ್ಯದರ್ಶಿ ಎಫ್ ಬಿ ಕಣವಿ, ಸಹ ಕಾರ್ಯದರ್ಶಿ ಶಾಂತವೀರ ಬೆಟಗೇರಿ, ತಾಲೂಕು ಕಾರ್ಯದರ್ಶಿ ಉಮಾ ಬಾಗಲಕೋಟೆ, ತಾಲೂಕು ಕೋಶಾಧಿಕಾರಿ ಮೇಘಾ ಹುಕ್ಕೇರಿ, ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿ ಸುಧಾ ಕಬ್ಬೂರ, ಪ್ರಮಿಳಾ ಜಕ್ಕನ್ನವರ, ಚನ್ನಬಸಪ್ಪ ಧಾರವಾಡ ಶೆಟ್ಟರ್, ಗಂಗಾಧರ ಗಾಡದ, ಸುನಂದಾ ಯಡಾಲ, ಪ್ರೊ .ಬಿ ಆರ್ ರಾಠೋಡ, ಗೀತಾ ಕುಲಕರ್ಣಿ, ಶ್ರೀನಿವಾಸ ಪಾಟೀಲ, ಡಾ. ಬಸು ಬೇವಿನಗಿಡದ, ಶ್ರೀಧರ್ ಗಸ್ತಿ, ಎಸ್ ಎಚ್ ಪ್ರತಾಪ್, ಬಿ ಕೆ ಗದ್ದೀಕೇರಿ, ಸಿದ್ಧರಾಮ ಹಿಪ್ಪರಗಿ, ವಿಲಾಸ ಶೇರ್ ಖಾನ್ ಮುಂತಾದವರು ಉಪಸ್ಥಿತರಿದ್ದರು.

  • Related Posts

    ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಗೆ ಬಂದು ಏಕಾಗ್ರತೆಯಿಂದ ಓದಬೇಕು ಡಾ.ಆನಂದ ಪಾಂಡುರಂಗಿ

    ಧಾರವಾಡ : ವ್ಯಕ್ತಿತ್ವ ವಿಕಸನಕ್ಕೆ ಬೇಕಾಗಿರುವ ಎಲ್ಲಾ ಚಟುವಟಿಕೆಗಳನ್ನು ಒದಗಿಸಿದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ಕಲಿಕೆ ನಿರಂತರವಾದ ಪ್ರಕ್ರಿಯೆ ವಿದ್ಯಾರ್ಥಿಗಳಿಗೆ ಗುರಿಬೇಕು ಕಾರ್ಯ ಯೋಜನೆ ಮಾಡಿಕೊಳ್ಳಬೇಕು ಸ್ಪಷ್ಟವಾದ ಗುರಿಯನ್ನು ಇಟ್ಟುಕೊಂಡು ಅಭ್ಯಾಸವನ್ನು ಆನಂದಿಸು, ಪರೀಕ್ಷೆಯನ್ನು ಆನಂದಿಸಿ ಬರುವ ಹೆಚ್ಚು ಕಮ್ಮಿ ಅಂಕಗಳು ಬಂದರು…

    ಪ್ರಥಮ ಕಿತ್ತೂರು ಕರ್ನಾಟಕ ಜಾಂಬೋರೇಟ್ ವ್ಯವಸ್ಥಿತವಾಗಿ ನಡೆಸಿ ಯಶಸ್ವಿಗೊಳಿಸಿ – ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಕರೆ

    ಧಾರವಾಡ ೦೫ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಧಾರವಾಡದ ವತಿಯಿಂದ ಇದೇ ದಿ.6 ರಿಂದ 10 ರವರೆಗೆ ಧಾರವಾಡ ತಾಲೂಕಿನ ದಡ್ಡಿಕಮಲಾಪೂರದ ಸಸ್ಯಚೇತನ ಜಿಲ್ಲಾ ತರಬೇತಿ ಕೇಂದ್ರದಲ್ಲಿ ನಡೆಯಲಿರುವ ವಿಭಾಗ ಮಟ್ಟದ ಪ್ರಥಮ ಕಿತ್ತೂರು ಕರ್ನಾಟಕ…

    RSS
    Follow by Email
    Telegram
    WhatsApp
    URL has been copied successfully!