
ಧಾರವಾಡ 27 : ಸಾಂಸ್ಕೃತಿಕ ನಗರಿ ಧಾರವಾಡದಲ್ಲಿ ನಿರಂತರವಾಗಿ 40 ವರ್ಷಗಳಿಂದ ರಂಗಭೂಮಿ, ಕಿರುಚಿತ್ರ, ಚಲನಚಿತ್ರ ಮತ್ತು ವಿವಿಧ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಂಘಟಿಕರಾಗಿ, ಕಲಾವಿದರಾಗಿ, ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದು, ಅಷ್ಟೇ ಅಲ್ಲದೆ ಕಳೆದ 17 ವರ್ಷಗಳಿಂದ “ಕಲಾಸಂಗಮ” ಎಂಬ ಹೆಸರಿನ ಸಂಸ್ಥೆಯನ್ನು ಕಟ್ಟಿಕೊಂಡು ಕಲಾವಿದರನ್ನು ಪ್ರೋತ್ಸಾಹಿಸುವ, ಕಲೆಯನ್ನು ಉಳಿಸುವ ಕಾರ್ಯ ಮಾಡುತ್ತ ಬಂದಿರುವುದನ್ನು ಪರಿಗಣಿಸಿ ಅವರ ಜೀವಮಾನ ಸಾಧನೆಗೆ ಮ್ಯಾಜಿಕ್ ಬುಕ್ ಆಫ್ ರೆಕಾರ್ಡ ಕಲೆ ಮತ್ತು ಸಾಂಸ್ಕೃತಿಕ ವಿಶ್ವವಿದ್ಯಾಲಯ ಎನ್.ಸಿ.ಆರ್. ದೆಹಲಿ ಇವರು ಧಾರವಾಡದ ಕಲಾಸಂಗಮ ಸಂಸ್ಥೆಯ ಅಧ್ಯಕ್ಷರಾದ ಪ್ರಭು ಹಂಚಿನಾಳ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಓರ್ವ ಕಲಾವಿದರಿಗೆ ಈ ಗೌರವ ಸಿಕ್ಕಿದ್ದು ಧಾರವಾಡ ಜಿಲ್ಲೆಯ ಸಮಸ್ತ ಕಲಾ ಬಳಗಕ್ಕೆ ಸಂದ ಗೌರವ ಎಂದು ತಿಳಿದು, ಜಿಲ್ಲೆಯ ಎಲ್ಲ ಕಲಾವಿದರು, ಗೆಳೆಯರ ಬಳಗ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಅಭಿನಂದನಾ ಸಮಾರಂಭವನ್ನು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ರಾ.ಹ. ದೇಶಪಾಂಡೆ ಸಭಾಭವನದಲ್ಲಿ ದಿ 29 ರಂದು ಬುಧವಾರ ಸಂಜೆ 5-30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಡಾ. ಕಲ್ಲೇಶ ಹಾವೇರಿಪೇಟ ತಿಳಸಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಂಗಾಯಣದ ನಿರ್ದೇಶಕರಾದ ಡಾ. ರಾಜು ತಾಳಿಕೋಟಿಯವರು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಖ್ಯಾತ ನ್ಯಾಯವಾದಿಗಳಾದ ಪ್ರಕಾಶ ಉಡಕೇರಿ, ವಾ.ಕ.ರಾ.ರ.ಸಾ.ಸಂಸ್ಥೆಯ ಮಾಜಿ ಅಧ್ಯಕ್ಷರಾದ ಸದಾನಂದ ಡಂಗನವರ, ಕ.ರಾ.ಪ್ರಾ.ಶಾ.ಶಿ.ಸಂಘ ಜಿಲ್ಲಾ ಘಟಕ, ಧಾರವಾಡದ ಪ್ರಧಾನ ಕಾರ್ಯದರ್ಶಿ ರಾಜಶೇಖರ ಹೊನ್ನಪ್ಪನವರ, ಉ.ಕ.ಚ.ಚಿ.ವಾಣಿಜ್ಯ ಮಂಡಳಿಯ ಕಾರ್ಯದರ್ಶಿ ಮಂಜುನಾಥ ಹಗೇದಾರ ಆಗಮಿಸಲಿದ್ದಾರೆ.
ಎಂದರು.
ಈ ಸಮಾರಂಭದಲ್ಲಿ ಹುಬ್ಬಳ್ಳಿ-ಧಾರವಾಡದ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಕಲಾವಿದರು ಹಾಗೂ ಗೆಳೆಯರ ಬಳಗ ಪಾಲ್ಗೊಳ್ಳಲಿದ್ದಾರೆ
ಪತ್ರಿಕಾ ಗೋಷ್ಠಿಯಲ್ಲಿ ರಮೇಶ ಹಿರೇರಡ್ಡಿ, ಎನ್. ಎ. ದೇಸಾಯಿ ಬಸವರಾಜ ಮುರಗೋಡ, ಡಾ. ಅರವಿಂದ ಮುಳಗುಂದ ಇದ್ದರು.