ಪತ್ರಕರ್ತ ರವಿಕುಮಾರ ಚನಬಸಪ್ಪ ಕಗ್ಗಣ್ಣವರ ಅವರಿಗೆ ಕರ್ನಾಟಕ ಸರ್ಕಾರ ಮಾಧ್ಯಮ ಅಕಾಡೆಮಿ ಪ್ರಶಸ್ತಿ

ಧಾರವಾಡ 05 :- ಪತ್ರಕರ್ತ ರವಿಕುಮಾರ ಅವರು ಕೆ.ವೈ.ಸಿ ಅಪ್‌ಡೇಟ ಮಾಡಲು ಮುಗಿಬಿದ್ದ ಜನ, ಬೆಳ್ಳಂಬೆಳಿಗ್ಗೆ ಕ್ಯೂ ಎಂಬ ಶಿರ್ಷಿಕೆಯಡಿ ವಿಶೇಷ ಲೇಖನ ಬರೆದಿದ್ದರು. ಗ್ಯಾಸ ಸಿಲಿಂಡರ್ ಏಜನ್ಸಿಯವರು ಕೆ.ವೈ.ಸಿ ಅಪ್‌ಡೇಟ ಮಾಡುವಂತೆ ದಿನಾಂಕ ನಿಗದಿ ಮಾಡಿದ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಜನರು ಬೆಳ್ಳಂಬೆಳಿಗ್ಗೆ ಸರತಿ ಸಾಲಿನಲ್ಲಿ ನಿಂತು ಕಷ್ಟಪಟ್ಟು ಹರಸಾಹಸ ಪಡುತ್ತಿರುವ ಕುರಿತು ಲೇಖನ ಬರೆದಿದ್ದರು. ಈ ವರದಿ ಗಮನಿಸಿದ ಆಹಾರ ಮತ್ತು ನಾಗರಿಕ ಇಲಾಖೆ ಅಪಡೇಟಗಾಗಿ ದಿನಾಂಕ ನಿಗದಿ ಪಡಿಸಿಲ್ಲ ಗ್ರಾಹಕರು ತಮಗೆ ಅನುಕೂಲವಾದಾಗ ಮಾಡಬಹುದು ಎಂದು ಪ್ರಕಟಣೆ ನೀಡಿತು.

Karnataka Government Media Academy Award to journalist Ravikumar Chanabasappa Kaggannavara

ಜನಸಾಮಾನ್ಯರ ಕಷ್ಟಕ್ಕೆ ಪರಿಹಾರ ತಂದುಕೊಟ್ಟ ಈ ವರದಿಯ ಫಲಶೃತಿ ಕಂಡಿರುವುದನ್ನು ಪರಿಗಣಿಸಿ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಘೋಷಣೆ ಮಾಡಿದೆ.
ಇವರಿಗೆ ಪ್ರಶಸ್ತಿ ಲಭಿಸಿರುವುದು ಸಂತೋಷದ ಸಂಗತಿಯಾಗಿದ್ದು ಪತ್ರಕರ್ತ ಮಿತ್ರರು ಸೇರಿದಂತೆ ಧಾರವಾಡದ ಮಾಧ್ಯಮ ಬಳಗವು ಪ್ರಶಸ್ತಿ ಪುರಸ್ಕೃತ ರವಿಕುಮಾರ ಅವರಿಗೆ ಅಭಿನಂದಿಸಿ ಶುಭ ಕೋರಿದೆ.ಹೀಗೆ ವರದಿಗಳನ್ನು ಪ್ರಸ್ತುತ ಪಡಿಸುವ  ಮೂಲಕ ಎಲ್ಲರ ಗಮನ ಸೆಳೆದು  ಪ್ರಶಸ್ತಿಗಳಿಗೆ ಭಾಜನರಾಗಲಿ ಎಂದು ಶುಭ ಹಾರೈಸುತ್ತೇವೆ.

  • Related Posts

    ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಗೆ ಬಂದು ಏಕಾಗ್ರತೆಯಿಂದ ಓದಬೇಕು ಡಾ.ಆನಂದ ಪಾಂಡುರಂಗಿ

    ಧಾರವಾಡ : ವ್ಯಕ್ತಿತ್ವ ವಿಕಸನಕ್ಕೆ ಬೇಕಾಗಿರುವ ಎಲ್ಲಾ ಚಟುವಟಿಕೆಗಳನ್ನು ಒದಗಿಸಿದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ಕಲಿಕೆ ನಿರಂತರವಾದ ಪ್ರಕ್ರಿಯೆ ವಿದ್ಯಾರ್ಥಿಗಳಿಗೆ ಗುರಿಬೇಕು ಕಾರ್ಯ ಯೋಜನೆ ಮಾಡಿಕೊಳ್ಳಬೇಕು ಸ್ಪಷ್ಟವಾದ ಗುರಿಯನ್ನು ಇಟ್ಟುಕೊಂಡು ಅಭ್ಯಾಸವನ್ನು ಆನಂದಿಸು, ಪರೀಕ್ಷೆಯನ್ನು ಆನಂದಿಸಿ ಬರುವ ಹೆಚ್ಚು ಕಮ್ಮಿ ಅಂಕಗಳು ಬಂದರು…

    ಪ್ರಥಮ ಕಿತ್ತೂರು ಕರ್ನಾಟಕ ಜಾಂಬೋರೇಟ್ ವ್ಯವಸ್ಥಿತವಾಗಿ ನಡೆಸಿ ಯಶಸ್ವಿಗೊಳಿಸಿ – ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಕರೆ

    ಧಾರವಾಡ ೦೫ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಧಾರವಾಡದ ವತಿಯಿಂದ ಇದೇ ದಿ.6 ರಿಂದ 10 ರವರೆಗೆ ಧಾರವಾಡ ತಾಲೂಕಿನ ದಡ್ಡಿಕಮಲಾಪೂರದ ಸಸ್ಯಚೇತನ ಜಿಲ್ಲಾ ತರಬೇತಿ ಕೇಂದ್ರದಲ್ಲಿ ನಡೆಯಲಿರುವ ವಿಭಾಗ ಮಟ್ಟದ ಪ್ರಥಮ ಕಿತ್ತೂರು ಕರ್ನಾಟಕ…

    RSS
    Follow by Email
    Telegram
    WhatsApp
    URL has been copied successfully!