ಆತ್ಮಹತ್ಯೆ ಮಾಡಿಕೊಂಡ ಕಾರ್ಮಿಕನ ಮನೆಗೆ ತೆರಳಿ ಸಾಂತ್ವನ ಹೇಳಿದ ಕಾರ್ಮಿಕ ಸಚಿವ ಸಚಿವ ಸಂತೋಷ ಲಾಡ್

ಧಾರವಾಡ : ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಬಿಡಿಕೆ ವಾಲ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಕಾರ್ಮಿಕ ನಿಂಗನಗೌಡ ಪಾಟೀಲ್ ಅವರು ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಮನೆಗೆ ಭೇಟಿ ನೀಡಿದ ಸಚಿವ ಸಂತೋಷ್ ಲಾಡ್ ಅವರು ಕುಟುಂಬದವರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.


ಕಂಪನಿಯು, ಕಾರ್ಮಿಕರಿಗೆ ವೇತನ ನೀಡದೆ ಸತಾಯಿಸುತ್ತಿದೆ ಎಂದು ಆರೋಪಿಸಿ ಕಂಪನಿಯ ಆಡಳಿತ ಮಂಡಳಿ ವಿರುದ್ಧ ನೌಕರರು ಕೆಲ ದಿನಗಳ ಹಿಂದೆ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಕಾರ್ಮಿಕರ ಅಹವಾಲುಗಳನ್ನು ಲಾಡ್ ಅವರು ಆಲಿಸಿದ್ದರು. ಆದರೆ ಪ್ರತಿಭಟನೆ ನಡೆಸಿದ್ದ ಕಾರ್ಮಿಕರನ್ನು ಇತ್ತೀಚೆಗೆ ಕಂಪನಿ ಕೆಲಸದಿಂದ ತೆಗೆದುಹಾಕಿತ್ತು. ಇದರಿಂದ ಮನನೊಂದ ನಿಂಗನಗೌಡ ಪಾಟೀಲ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು.
ಜಿಲ್ಲಾ ಪ್ರವಾಸದಲ್ಲಿದ್ದ ಸಚಿವ ಲಾಡ್ ಅವರು ನಿಂಗನಗೌಡ ಅವರ ಮನೆಗೆ ಭೇಟಿ ನೀಡಿದ್ದರು. ಲಾಡ್ ಅವರು ಮನೆಗೆ ಭೇಟಿ ನೀಡುತ್ತಿದ್ದಾಗಲೇ ನಿಂಗನಗೌಡ ಕುಟುಂಬದವರು ದುಃಖದ ಮಡುವಿನಲ್ಲಿದ್ದರು. ಮನೆ ಮಗನನ್ನು ಕಳೆದುಕೊಂಡು ಅವರೆಲ್ಲ ನೋವಿನಲ್ಲಿದ್ದರು. ಅವರ ನೋವನ್ನು ಆಲಿಸಿದ ಸಚಿವರು ಸಾಮಾನ್ಯರಂತೆ ನೆಲದ ಮೇಲೆ ಕುಳಿತು ಎಲ್ಲವನ್ನೂ ಆಲಿಸಿಕೊಂಡು ಮಮ್ಮುಲ ಮರುಗಿದರು. ಯಾರಿಗಾದರೂ ಕಷ್ಟವಾದರೆ, ಸಮಸ್ಯೆ ಇದ್ದರೆ ನನಗೆ ತಿಳಿಸಿ, ನನ್ನ ಕೈಲಿ ಎಷ್ಟಾಗುತ್ತೆ ಅಷ್ಟು ಸಹಾಯ ಮಾಡುತ್ತೇನೆ. ಸಾರ್ವಜನಿಕ ಜೀವನದಲ್ಲಿ ನಾನು ಬದುಕಿ ಉಳಿದವನು, ಕಷ್ಟವನ್ನು ಎದುರಿಸುವುದನ್ನು ಎಲ್ಲರೂ ಕಲಿಯಬೇಕು. ಬಡವ, ಸಾಹುಕಾರ ಯಾರೇ ಇರಲಿ, ಕಷ್ಟ ಸುಖ ಎಲ್ಲರಿಗೂ ಬಂದೇ ಬರುತ್ತದೆ. ಜೀವ ತೆಗೆದುಕೊಳ್ಳುವುದೇ ಪರಿಹಾರವಾಗಬಾರದು. ಇದೆಲ್ಲ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದಿಲ್ಲ ಎಂದು ಹೇಳಿದರು.

ಕೆಲ ದಿನಗಳ ಹಿಂದೆ ಕಂಪನಿ ವಿರುದ್ಧ ಪ್ರತಿಭಟನೆ ನಡೆಸುತಿದ್ದಾಗ ಅವರನ್ನು ಭೇಟಿ ಮಾಡಿ ಮಾತನಾಡಿದ್ದೆ. ಏನಾದರೂ ಕಷ್ಟವಿದ್ದರೆ ಬನ್ನಿ ಎಂದು ತಿಳಿಸಿದ್ದೆ ಎಂದರು.

ಸಚಿವರ ಈ ಮಾನವೀಯ ನಡೆಗೆ ಅಲ್ಲಿ ಸೇರಿದ್ದ ಜನರು ಮೌನವಾಗಿದ್ದರು. ಇಂತಹ ಜನಪ್ರತಿನಿಧಿಯನ್ನು ಪಡೆದ ನಾವೇ ಪುಣ್ಯವಂತರು ಎಂಬ ಭಾವನೆ ಅವರಲ್ಲಿತ್ತು.

  • Related Posts

    ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಗೆ ಬಂದು ಏಕಾಗ್ರತೆಯಿಂದ ಓದಬೇಕು ಡಾ.ಆನಂದ ಪಾಂಡುರಂಗಿ

    ಧಾರವಾಡ : ವ್ಯಕ್ತಿತ್ವ ವಿಕಸನಕ್ಕೆ ಬೇಕಾಗಿರುವ ಎಲ್ಲಾ ಚಟುವಟಿಕೆಗಳನ್ನು ಒದಗಿಸಿದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ಕಲಿಕೆ ನಿರಂತರವಾದ ಪ್ರಕ್ರಿಯೆ ವಿದ್ಯಾರ್ಥಿಗಳಿಗೆ ಗುರಿಬೇಕು ಕಾರ್ಯ ಯೋಜನೆ ಮಾಡಿಕೊಳ್ಳಬೇಕು ಸ್ಪಷ್ಟವಾದ ಗುರಿಯನ್ನು ಇಟ್ಟುಕೊಂಡು ಅಭ್ಯಾಸವನ್ನು ಆನಂದಿಸು, ಪರೀಕ್ಷೆಯನ್ನು ಆನಂದಿಸಿ ಬರುವ ಹೆಚ್ಚು ಕಮ್ಮಿ ಅಂಕಗಳು ಬಂದರು…

    ಪ್ರಥಮ ಕಿತ್ತೂರು ಕರ್ನಾಟಕ ಜಾಂಬೋರೇಟ್ ವ್ಯವಸ್ಥಿತವಾಗಿ ನಡೆಸಿ ಯಶಸ್ವಿಗೊಳಿಸಿ – ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಕರೆ

    ಧಾರವಾಡ ೦೫ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಧಾರವಾಡದ ವತಿಯಿಂದ ಇದೇ ದಿ.6 ರಿಂದ 10 ರವರೆಗೆ ಧಾರವಾಡ ತಾಲೂಕಿನ ದಡ್ಡಿಕಮಲಾಪೂರದ ಸಸ್ಯಚೇತನ ಜಿಲ್ಲಾ ತರಬೇತಿ ಕೇಂದ್ರದಲ್ಲಿ ನಡೆಯಲಿರುವ ವಿಭಾಗ ಮಟ್ಟದ ಪ್ರಥಮ ಕಿತ್ತೂರು ಕರ್ನಾಟಕ…

    RSS
    Follow by Email
    Telegram
    WhatsApp
    URL has been copied successfully!