ಶಾಸಕ ವಿನಯ ಕುಲಕರ್ಣಿ ತಾಲೂಕು ಪಂಚಾಯತಿಯ ಕಚೇರಿಯಲ್ಲಿ ಮನಮೋಹನಸಿಂಗ ಅವರಿಗೆ ಶೃದ್ಧಾಂಜಲಿ

ಧಾರವಾಡ 27 : ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞರಾಗಿದ್ದ ಡಾ.ಮನಮೋಹನ ಸಿಂಗ್ (92) ಅವರು ನಿಧನರಾದ ಹಿನ್ನೆಲೆಯಲ್ಲಿ,ಧಾರವಾಡ – 71 ಗ್ರಾಮೀಣ ಕ್ಷೇತ್ರದ  ಶಾಸಕ ವಿನಯ ಕುಲಕರ್ಣಿ ಯವರ, ತಾಲೂಕು ಪಂಚಾಯತಿಯಲ್ಲಿರುವ ಕಚೇರಿಯಲ್ಲಿ ಇಂದು, ಡಿಸೆಂಬರ್ 27 ಬೆಳಿಗ್ಗೆ 11-00 ಗಂಟೆಗೆ ಮನಮೋಹನಸಿಂಗ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಒಂದು ನಿಮಿಷ ಮೌನಚರಣೆ ಮಾಡಿ ಶೃದ್ಧಾಂಜಲಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕೆ ಎಮ್ ಎಫ್ ಸದಸ್ಯರಾದ ಶ್ರೀಮತಿ ಶಿವಲೀಲಾ ವಿನಯ ಕುಲಕರ್ಣಿಯವರು, ಬ್ಲಾಕ್ ಅಧ್ಯಕ್ಷರುಗಳಾದ ಅರವಿಂದ ಏಗನಗೌಡರ, ಈಶ್ವರ್ ಶಿವಳ್ಳಿ, ಮಹಾನಗರ ಪಾಲಿಕೆ ಸದಸ್ಯರುಗಳಾದ ರಾಜಶೇಖರ್ ಕಮತಿ, ಪ್ರಕಾಶ ಘಾಟಗೆ, ದೀಪಾ ನೀರಲಕಟ್ಟಿ, ಸೂರವ್ವ ಪಾಟೀಲ, ಹಾಗೂ ಮುಖಂಡರುಗಳಾದ ಚಣಬಸಪ್ಪ ಮಟ್ಟಿ, ಸಂಜು ಲಕಮನಹಳ್ಳಿ, ನಾಗಪ್ಪ ಮಾದರ, ನಿಜಾಮ ರಾಯಿ,ಕಿಶೋರ ಬಡಿಗೇರ,ನವೀನ ಕದಂ,ಮಿಲಿಂದ್, ಮಂಜು ಉಡಕೇರಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಗ್ರಾಮ ಪಂಚಾಯತಿ ಸದಸ್ಯರು, ಮಾಜಿ ಜಿಲ್ಲಾ ಪಂಚಾಯತಿ, ತಾಲೂಕ ಪಂಚಾಯತಿ ಸದಸ್ಯರು ಹಾಗೂ ಕಾರ್ಯಕರ್ತರು ಈ ಸಂತಾಪ ಸಭೆಯಲ್ಲಿ ಭಾಗವಹಿಸಿದ್ದರು.

  • Related Posts

    ಮಾರುಕಟ್ಟೆಯ ಹಮಾಲರ ಸಂಘದಿಂದ ಮುರುಘಮಠಕ್ಕೆ ಕ್ವೀಂಟಲ್ ಬೆಲ್ಲ ಪ್ರಸಾದ

    ಶ್ರೀ ಮಧತನಿ ಮುರುಗೇಂದ್ರ ಮಹಾಶಿವಯೋಗಿಗಳ ಜಾತ್ರಾಮಹೋತ್ಸವದ ಅಂಗವಾಗಿ ಧಾರವಾಡದ ಮೃತ್ಯುಂಜಯ ಮಾರುಕಟ್ಟೆಯ ಹಮಾಲರ ಸಂಘದಿಂದ, ಹಣ್ಣೊಂದು ಕ್ವೀಂಟಲ್ ಬೆಲ್ಲವನ್ನು ಪ್ರಸಾದಕ್ಕೆ ನೀಡಿದರು. ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮುಖಾಂತರ ಎ ಪಿ ಎಮ್ ಸಿ ಇಂದ ಶ್ರೀ ಮುರುಘಮಠಕ್ಕೆ ನೀಡಿದರು. ಈ ಸಂದರ್ಭದಲ್ಲಿ…

    ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವಾರ್ಷಿಕ ಸಾಮಾನ್ಯ ಸಭೆ

    ಧಾರವಾಡ 01: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಧಾರವಾಡ ಶಾಖೆಯ 2024 2025 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯನ್ನು ಮಂಗಳವಾರ, ದಿ 04 ರಂದು ಮುಂಜಾನೆ 10:30 ಗಂಟೆಗೆ ಕನ್ನಡ ಕುಲಪುರೋಹಿತ ಆಲೂರು ವಂಕಟರಾವ ಸಾಂಸ್ಕೃತಿಕ ಭವನದಲ್ಲಿ  ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ…

    RSS
    Follow by Email
    Telegram
    WhatsApp
    URL has been copied successfully!