ಶಾಸಕ ವಿನಯ ಕುಲಕರ್ಣಿ ತಾಲೂಕು ಪಂಚಾಯತಿಯ ಕಚೇರಿಯಲ್ಲಿ ಮನಮೋಹನಸಿಂಗ ಅವರಿಗೆ ಶೃದ್ಧಾಂಜಲಿ

ಧಾರವಾಡ 27 : ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞರಾಗಿದ್ದ ಡಾ.ಮನಮೋಹನ ಸಿಂಗ್ (92) ಅವರು ನಿಧನರಾದ ಹಿನ್ನೆಲೆಯಲ್ಲಿ,ಧಾರವಾಡ – 71 ಗ್ರಾಮೀಣ ಕ್ಷೇತ್ರದ  ಶಾಸಕ ವಿನಯ ಕುಲಕರ್ಣಿ ಯವರ, ತಾಲೂಕು ಪಂಚಾಯತಿಯಲ್ಲಿರುವ ಕಚೇರಿಯಲ್ಲಿ ಇಂದು, ಡಿಸೆಂಬರ್ 27 ಬೆಳಿಗ್ಗೆ 11-00 ಗಂಟೆಗೆ ಮನಮೋಹನಸಿಂಗ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಒಂದು ನಿಮಿಷ ಮೌನಚರಣೆ ಮಾಡಿ ಶೃದ್ಧಾಂಜಲಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕೆ ಎಮ್ ಎಫ್ ಸದಸ್ಯರಾದ ಶ್ರೀಮತಿ ಶಿವಲೀಲಾ ವಿನಯ ಕುಲಕರ್ಣಿಯವರು, ಬ್ಲಾಕ್ ಅಧ್ಯಕ್ಷರುಗಳಾದ ಅರವಿಂದ ಏಗನಗೌಡರ, ಈಶ್ವರ್ ಶಿವಳ್ಳಿ, ಮಹಾನಗರ ಪಾಲಿಕೆ ಸದಸ್ಯರುಗಳಾದ ರಾಜಶೇಖರ್ ಕಮತಿ, ಪ್ರಕಾಶ ಘಾಟಗೆ, ದೀಪಾ ನೀರಲಕಟ್ಟಿ, ಸೂರವ್ವ ಪಾಟೀಲ, ಹಾಗೂ ಮುಖಂಡರುಗಳಾದ ಚಣಬಸಪ್ಪ ಮಟ್ಟಿ, ಸಂಜು ಲಕಮನಹಳ್ಳಿ, ನಾಗಪ್ಪ ಮಾದರ, ನಿಜಾಮ ರಾಯಿ,ಕಿಶೋರ ಬಡಿಗೇರ,ನವೀನ ಕದಂ,ಮಿಲಿಂದ್, ಮಂಜು ಉಡಕೇರಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಗ್ರಾಮ ಪಂಚಾಯತಿ ಸದಸ್ಯರು, ಮಾಜಿ ಜಿಲ್ಲಾ ಪಂಚಾಯತಿ, ತಾಲೂಕ ಪಂಚಾಯತಿ ಸದಸ್ಯರು ಹಾಗೂ ಕಾರ್ಯಕರ್ತರು ಈ ಸಂತಾಪ ಸಭೆಯಲ್ಲಿ ಭಾಗವಹಿಸಿದ್ದರು.

  • Related Posts

    ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಗೆ ಬಂದು ಏಕಾಗ್ರತೆಯಿಂದ ಓದಬೇಕು ಡಾ.ಆನಂದ ಪಾಂಡುರಂಗಿ

    ಧಾರವಾಡ : ವ್ಯಕ್ತಿತ್ವ ವಿಕಸನಕ್ಕೆ ಬೇಕಾಗಿರುವ ಎಲ್ಲಾ ಚಟುವಟಿಕೆಗಳನ್ನು ಒದಗಿಸಿದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ಕಲಿಕೆ ನಿರಂತರವಾದ ಪ್ರಕ್ರಿಯೆ ವಿದ್ಯಾರ್ಥಿಗಳಿಗೆ ಗುರಿಬೇಕು ಕಾರ್ಯ ಯೋಜನೆ ಮಾಡಿಕೊಳ್ಳಬೇಕು ಸ್ಪಷ್ಟವಾದ ಗುರಿಯನ್ನು ಇಟ್ಟುಕೊಂಡು ಅಭ್ಯಾಸವನ್ನು ಆನಂದಿಸು, ಪರೀಕ್ಷೆಯನ್ನು ಆನಂದಿಸಿ ಬರುವ ಹೆಚ್ಚು ಕಮ್ಮಿ ಅಂಕಗಳು ಬಂದರು…

    ಪ್ರಥಮ ಕಿತ್ತೂರು ಕರ್ನಾಟಕ ಜಾಂಬೋರೇಟ್ ವ್ಯವಸ್ಥಿತವಾಗಿ ನಡೆಸಿ ಯಶಸ್ವಿಗೊಳಿಸಿ – ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಕರೆ

    ಧಾರವಾಡ ೦೫ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಧಾರವಾಡದ ವತಿಯಿಂದ ಇದೇ ದಿ.6 ರಿಂದ 10 ರವರೆಗೆ ಧಾರವಾಡ ತಾಲೂಕಿನ ದಡ್ಡಿಕಮಲಾಪೂರದ ಸಸ್ಯಚೇತನ ಜಿಲ್ಲಾ ತರಬೇತಿ ಕೇಂದ್ರದಲ್ಲಿ ನಡೆಯಲಿರುವ ವಿಭಾಗ ಮಟ್ಟದ ಪ್ರಥಮ ಕಿತ್ತೂರು ಕರ್ನಾಟಕ…

    RSS
    Follow by Email
    Telegram
    WhatsApp
    URL has been copied successfully!