ಮಹಾಪರಿನಿರ್ವಾಣ ದಿನ ನಿಮಿತ್ಯ ಮುಂಬೈ ಚಲೋ

ಧಾರವಾಡ : ಡಿ. 6 ರಂದು ಸಂವಿಧಾನ ಶಿಲ್ಪಿ ಡಾ. ಬಿ ಆರ್‌ ಅಂಬೇಡ್ಕರ್‌ ಅವರ ಪುಣ್ಯತಿಥಿ. ಭಾರತದಲ್ಲಿ ಅಂಬೇಡ್ಕರ್‌ ಅವರ ಪುಣ್ಯತಿಥಿಯನ್ನು ಮಹಾಪರಿನಿರ್ವಾಣ ದಿನ ಎಂದು ಆಚರಿಸುತ್ತಾರೆ. ಕರ್ನಾಟಕ ಭೀಮಸೇನೆ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಭೋಜರಾಜ ಡಿ ಮಾದರ ಅವರು ಧಾರವಾಡದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ. ಮುಂಭೈ ಚಲೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಭಾರತ ಕಂಡ ಮಹಾನ್‌ ವ್ಯಕ್ತಿಗಳಲ್ಲಿ ಡಾ. ಬಿ.ಆರ್‌. ಅಂಬೇಡ್ಕರ್‌ ಕೂಡ ಒಬ್ಬರು. ಇವರನ್ನು ಸಂವಿಧಾನ ಶಿಲ್ಪಿ ಎಂದು ಕರೆಯುತ್ತಾರೆ. ಭಾರತ ದೇಶಕ್ಕೆ ಇವರು ನೀಡಿರುವ ಕೊಡುಗೆಗಳು ಅಪಾರ. ಅವರ ಜೀವನ ಹಾಗೂ ಪರಂಪರೆ ಸರ್ವರಿಗೂ ಆದರ್ಶಪ್ರಿಯವಾದದ್ದು. ಡಾ. ಭೀಮಾರಾವ್‌ ರಾಮ್‌ಜಿ ಅಂಬೇಡ್ಕರ್‌ ಅವರು ಸಮಾಜ ಸುಧಾರಕರೂ ಆಗಿದ್ದರು. ದಲಿತ ಬೌದ್ಧ ಚಳುವಳಿಯನ್ನು ಮುನ್ನಡೆಸುವ ಮೂಲಕ ಪ್ರೇರಣೆಯಾದವರು. ಡಿಸೆಂಬರ್‌ 6 ಇವರ ಪುಣ್ಯತಿಥಿ. ಈ ದಿನವನ್ನು ಮಹಾಪರಿನಿರ್ವಾಣ ದಿನ ಎಂದು ಭಾರತದಾದ್ಯಂತ ಆಚರಿಸಲಾಗುತ್ತದೆ. ಭಾರತದಲ್ಲಿ ಅಸ್ಪೃಶ್ಯತೆಯ ನಿರ್ಮೂಲನೆಗೆ ಅವರ ನಿಲುವು ಮತ್ತು ಕೊಡುಗೆಗಳ ಕಾರಣ, ಅವರನ್ನು ಬೌದ್ಧ ಗುರು ಎಂದು ಪರಿಗಣಿಸಲಾಗಿದೆ. ಇವರ ಸಮಾಧಿ ಇರುವ ಸ್ಥಳವನ್ನು ಪವಿತ್ರ ಭೂಮಿ ಎಂದು ಗುರುತಿಸಲಾಗಿದೆ ಮತ್ತು ಇದನ್ನು ಚೈತ್ಯ ಭೂಮಿ ಎಂದು ಕೂಡ ಕರೆಯಲಾಗುತ್ತದೆ ಎಂದರು.

ಹಿರಿಯ ಪತ್ರಕರ್ತರಾದ ಬಸವರಾಜ ಆನೆಗುಂದಿ ಮಾತನಾಡಿ ಸಂವಿಧಾನ ಪಿತಾಮಹ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕೊಡುಗೆ ಅಪಾರವಾದದ್ದು ಜಗತ್ತು ಅವರನ್ನ ಗೌರವಿಸಿ ಪ್ರೀತಿಸುತ್ತಿರುವಾಗ ಕರ್ನಾಟಕ ಭೀಮಸೇನೆ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಭೋಜರಾಜ ಡಿ ಮಾದರ ನೇತೃತ್ವದಲ್ಲಿ ಚೈತ್ಯ ಭೂಮಿ ತೆರಳುತ್ತಿರುವ ಎಲ್ಲರಿಗೂ ಶುಭವಾಗಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಸತೀಶ್ ಸರ್ಜಾಪುರ್, ಕಲ್ಲಪ್ಪ ಭೋವಿ, ಮಂಜುನಾಥ್ ವರೂರ್, ಸಮರ್ಥ್ ಸರ್ಜಾಪುರ್ ಚಂದ್ರಶೇಖರ್ ಹಿರೇಮಠ, ಮಾದೇವ ಹುಬ್ಬಳ್ಳಿ ಪ್ರಕಾಶ್ ಸೇರಿದಂತೆ ಮೊದಲಾದವರು ಇದ್ದರು.

  • Related Posts

    ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಗೆ ಬಂದು ಏಕಾಗ್ರತೆಯಿಂದ ಓದಬೇಕು ಡಾ.ಆನಂದ ಪಾಂಡುರಂಗಿ

    ಧಾರವಾಡ : ವ್ಯಕ್ತಿತ್ವ ವಿಕಸನಕ್ಕೆ ಬೇಕಾಗಿರುವ ಎಲ್ಲಾ ಚಟುವಟಿಕೆಗಳನ್ನು ಒದಗಿಸಿದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ಕಲಿಕೆ ನಿರಂತರವಾದ ಪ್ರಕ್ರಿಯೆ ವಿದ್ಯಾರ್ಥಿಗಳಿಗೆ ಗುರಿಬೇಕು ಕಾರ್ಯ ಯೋಜನೆ ಮಾಡಿಕೊಳ್ಳಬೇಕು ಸ್ಪಷ್ಟವಾದ ಗುರಿಯನ್ನು ಇಟ್ಟುಕೊಂಡು ಅಭ್ಯಾಸವನ್ನು ಆನಂದಿಸು, ಪರೀಕ್ಷೆಯನ್ನು ಆನಂದಿಸಿ ಬರುವ ಹೆಚ್ಚು ಕಮ್ಮಿ ಅಂಕಗಳು ಬಂದರು…

    ಪ್ರಥಮ ಕಿತ್ತೂರು ಕರ್ನಾಟಕ ಜಾಂಬೋರೇಟ್ ವ್ಯವಸ್ಥಿತವಾಗಿ ನಡೆಸಿ ಯಶಸ್ವಿಗೊಳಿಸಿ – ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಕರೆ

    ಧಾರವಾಡ ೦೫ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಧಾರವಾಡದ ವತಿಯಿಂದ ಇದೇ ದಿ.6 ರಿಂದ 10 ರವರೆಗೆ ಧಾರವಾಡ ತಾಲೂಕಿನ ದಡ್ಡಿಕಮಲಾಪೂರದ ಸಸ್ಯಚೇತನ ಜಿಲ್ಲಾ ತರಬೇತಿ ಕೇಂದ್ರದಲ್ಲಿ ನಡೆಯಲಿರುವ ವಿಭಾಗ ಮಟ್ಟದ ಪ್ರಥಮ ಕಿತ್ತೂರು ಕರ್ನಾಟಕ…

    RSS
    Follow by Email
    Telegram
    WhatsApp
    URL has been copied successfully!