ಕಸಾಪ ಭವನದಲ್ಲಿ ರಾಷ್ಟ್ರ ಕವಿ ಕುವೆಂಪು ಅವರ ಜನ್ಮದಿನಾಚರಣೆ

ಧಾರವಾಡ 29 : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಧಾರವಾಡ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರ ಕವಿ ಕುವೆಂಪು ಅವರ ಜನ್ಮದಿನ ಆಚರಣೆ ಮಾಡಲಾಯಿತು. ತಾಲೂಕು ಕಸಾಪ ಅಧ್ಯಕ್ಷ ಮಹಾಂತೇಶ ನರೇಗಲ್ ಅವರು ಕುವೆಂಪು ಅವರ ಕುರಿತು ಬಾರಿಸು ಕನ್ನಡ ಡಿಂಡಿಮವ ಎಂದು ಕನ್ನಡದ ಡೋಲನ್ನು ಭಾರಿಸುವ ಮೂಲಕ ಕನ್ನಡಕ್ಕಾಗಿ ಹೋರಾಡಿದ ಧೀಮಂತ ಕವಿ ಎಂದು ಬಣ್ಣಿಸಿದರು. ಕನ್ನಡಕ್ಕಾಗಿ ಕೈ ಎತ್ತು ನಿನ್ನ ಕೈ ಕಲ್ಪವೃಕ್ಷವಾಗುತ್ತದೆ ಎಂದು ಕುವೆಂಪು ಅವರ ಈ ವಾಕ್ಯವನ್ನು ಸ್ಮರಿಸಿದರು.

ಡಾ. ಲಿಂಗರಾಜ ಅಂಗಡಿ ಅಧ್ಯಕ್ಷತೆ ವಹಿಸಿ ರಾಷ್ಟ್ರ ಕವಿ, ಯುಗದ ಕವಿ, ಜಗದ ಕವಿ ಎಂದು ಪ್ರಸಿದ್ಧರಾದ ಕುವೆಂಪು ಅವರ ಸಾಹಿತ್ಯ ಅಧ್ಯಯನ ಯೋಗ್ಯವಾಗಿದೆ ಎಂದರು.

ಡಾ. ಎಸ್ ದೊಡಮನಿ,ಚನ್ನಬಸಪ್ಪ ಧಾರವಾಡ ಶೆಟ್ಟರ್, ಪಿ ಡಿ ಬಸನಾಳ, ಮರೀಷ ನಾಗಣ್ಣವರ, ಎಮ್ ಎ ಹುಲಿಗೆಜ್ಜಿ, ಕೆ ಎಸ್ ಬಂಗಾರಿ, ಹನುಮಂತ ಮಾರಡಗಿ, ಪಿ ಆರ್ ಮ್ಯಾಗೇರಿ, ಅಂಜನೇಯ ಅರವೇಡ, ಮುಂತಾದವರು ಉಪಸ್ಥಿತರಿದ್ದರು.ಶಾಂತವೀರ ಬೆಟಗೇರಿ ಸ್ವಾಗತಿಸಿದರು, ಗಂಗಾಧರ ಗಾಡದ ನಿರೂಪಿಸಿದರು, ಆತ್ಮಾನಂದ ಗದ್ದೀಕೇರಿ ವಂದಿಸಿದರು.

  • Related Posts

    ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಗೆ ಬಂದು ಏಕಾಗ್ರತೆಯಿಂದ ಓದಬೇಕು ಡಾ.ಆನಂದ ಪಾಂಡುರಂಗಿ

    ಧಾರವಾಡ : ವ್ಯಕ್ತಿತ್ವ ವಿಕಸನಕ್ಕೆ ಬೇಕಾಗಿರುವ ಎಲ್ಲಾ ಚಟುವಟಿಕೆಗಳನ್ನು ಒದಗಿಸಿದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ಕಲಿಕೆ ನಿರಂತರವಾದ ಪ್ರಕ್ರಿಯೆ ವಿದ್ಯಾರ್ಥಿಗಳಿಗೆ ಗುರಿಬೇಕು ಕಾರ್ಯ ಯೋಜನೆ ಮಾಡಿಕೊಳ್ಳಬೇಕು ಸ್ಪಷ್ಟವಾದ ಗುರಿಯನ್ನು ಇಟ್ಟುಕೊಂಡು ಅಭ್ಯಾಸವನ್ನು ಆನಂದಿಸು, ಪರೀಕ್ಷೆಯನ್ನು ಆನಂದಿಸಿ ಬರುವ ಹೆಚ್ಚು ಕಮ್ಮಿ ಅಂಕಗಳು ಬಂದರು…

    ಪ್ರಥಮ ಕಿತ್ತೂರು ಕರ್ನಾಟಕ ಜಾಂಬೋರೇಟ್ ವ್ಯವಸ್ಥಿತವಾಗಿ ನಡೆಸಿ ಯಶಸ್ವಿಗೊಳಿಸಿ – ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಕರೆ

    ಧಾರವಾಡ ೦೫ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಧಾರವಾಡದ ವತಿಯಿಂದ ಇದೇ ದಿ.6 ರಿಂದ 10 ರವರೆಗೆ ಧಾರವಾಡ ತಾಲೂಕಿನ ದಡ್ಡಿಕಮಲಾಪೂರದ ಸಸ್ಯಚೇತನ ಜಿಲ್ಲಾ ತರಬೇತಿ ಕೇಂದ್ರದಲ್ಲಿ ನಡೆಯಲಿರುವ ವಿಭಾಗ ಮಟ್ಟದ ಪ್ರಥಮ ಕಿತ್ತೂರು ಕರ್ನಾಟಕ…

    RSS
    Follow by Email
    Telegram
    WhatsApp
    URL has been copied successfully!