ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ-2025 ಗಾಮನಗಟ್ಟಿಯ ಭಾರೀ ವಾಹನ ಚಾಲಕರ ತರಬೇತಿ ಸಂಸ್ಥೆಯಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

ಧಾರವಾಡ  01: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ-2025 ರ ಅಂಗವಾಗಿ ಹುಬ್ಬಳ್ಳಿ ಗಾಮನಗಟ್ಟಿಯ ಭಾರೀ ವಾಹನ ಚಾಲಕರ ತರಬೇತಿ ಸಂಸ್ಥೆಯಲ್ಲಿ ವಾಹನ ಚಾಲಕರಿಗೆ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಧಾರವಾಡ (ಪಶ್ಚಿಮ) ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಹಾಗೂ ಉಪಸಾರಿಗೆ ಆಯುಕ್ತ ನೂರ್ ಮೊಹಮ್ಮದ್ ಬಾಷಾ ಅವರು ರಸ್ತೆ ಅಪಘಾತಕ್ಕೆ ಕಾರಣ ಹಾಗೂ ಸಂಚಾರಿ ನಿಯಮಗಳನ್ನು ವಾಹನ ಚಾಲಕರಿಗೆ ಮನವರಿಕೆ ಮಾಡಿ, ರಸ್ತೆ ಅಪಘಾತಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ದ್ವಿಚಕ್ರ ವಾಹನ ಬಳಸುವ ಪೋಷಕರಿಗೆ 4 ವರ್ಷದ ಒಳಗಿನ ಮಕ್ಕಳಿಗೆ ಸೇಪ್ಟಿ ಹಾರ್ನೆಸ್‍ನನ್ನು ಬಳಸಿಕೊಂಡು ವಾಹನವನ್ನು ಚಲಾಯಿಸುವಂತೆ ವಾಹನ ಚಾಲಕರಿಗೆ ಸಲಹೆ ನೀಡಿದ್ದರು.
ಕಾರ್ಯಕ್ರಮದಲ್ಲಿ ಕಛೇರಿಯ ಸಿಬ್ಬಂದಿಗಳಾದ ರಮೇಶ ಮಾಳಗಿ, ಹಿಮೋವಾನಿ, ಸಚಿನ್ ಹುಲಕೋಟಿ, ವಿಜಯ ಕಮ್ಮಾರ, ಅಬ್ಬಾಸಾಹೇಬ್ ಅವರು ಭಾಗವಹಿಸಿದ್ದರು.

  • Related Posts

    ಮಾರುಕಟ್ಟೆಯ ಹಮಾಲರ ಸಂಘದಿಂದ ಮುರುಘಮಠಕ್ಕೆ ಕ್ವೀಂಟಲ್ ಬೆಲ್ಲ ಪ್ರಸಾದ

    ಶ್ರೀ ಮಧತನಿ ಮುರುಗೇಂದ್ರ ಮಹಾಶಿವಯೋಗಿಗಳ ಜಾತ್ರಾಮಹೋತ್ಸವದ ಅಂಗವಾಗಿ ಧಾರವಾಡದ ಮೃತ್ಯುಂಜಯ ಮಾರುಕಟ್ಟೆಯ ಹಮಾಲರ ಸಂಘದಿಂದ, ಹಣ್ಣೊಂದು ಕ್ವೀಂಟಲ್ ಬೆಲ್ಲವನ್ನು ಪ್ರಸಾದಕ್ಕೆ ನೀಡಿದರು. ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮುಖಾಂತರ ಎ ಪಿ ಎಮ್ ಸಿ ಇಂದ ಶ್ರೀ ಮುರುಘಮಠಕ್ಕೆ ನೀಡಿದರು. ಈ ಸಂದರ್ಭದಲ್ಲಿ…

    ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವಾರ್ಷಿಕ ಸಾಮಾನ್ಯ ಸಭೆ

    ಧಾರವಾಡ 01: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಧಾರವಾಡ ಶಾಖೆಯ 2024 2025 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯನ್ನು ಮಂಗಳವಾರ, ದಿ 04 ರಂದು ಮುಂಜಾನೆ 10:30 ಗಂಟೆಗೆ ಕನ್ನಡ ಕುಲಪುರೋಹಿತ ಆಲೂರು ವಂಕಟರಾವ ಸಾಂಸ್ಕೃತಿಕ ಭವನದಲ್ಲಿ  ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ…

    RSS
    Follow by Email
    Telegram
    WhatsApp
    URL has been copied successfully!