ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ತುಳಸಿ ಗೌಡರವರು ನಿಧನ

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಅಂಕೋಲ ತಾಲೂಕಿನ ಹೊನ್ನಳ್ಳಿಯ ತುಳಸಿ ಗೌಡ (86) ರವರು ವಯೋಸಹಜತೆಯಿಂದ ಇಂದು ಸಂಜೆ ನಿಧನರಾಗಿದ್ದಾರೆ.

ವರ್ಷಕ್ಕೆ ಮೂವತ್ತು ಸಾವಿರಕ್ಕೂ ಅಧಿಕ ಸಸಿಗಳನ್ನು ತುಳಸಿ ಗೌಡ ಅವರು ನೆಟ್ಟು ಬೆಳೆಸುತ್ತಿದ್ದರು. ಅಕಾಲಿಕವಾಗಿ ಪತಿಯನ್ನು ಕಳೆದುಕೊಂಡು ಇಬ್ಬರು ಮಕ್ಕಳನ್ನು ಸಾಕಲು ಅರಣ್ಯ ಇಲಾಖೆಯಲ್ಲಿ ದಿನಗೂಲಿ ಕೆಲಸಕ್ಕೆ ಸೇರಿದ ಇವರು ಅಲ್ಲಿಯೇ ಗಿಡಗಳ ಆರೈಕೆ ಪೋಷಣೆ ಮಾಡುತ್ತಾ ಹಲವು ಕಾಡು ಗಿಡಗಳ ಬೀಜ ಸಂಗ್ರಹಿಸಿ ಸಸಿಗಳನ್ನು ಮಾಡಿ ಕಾಡಿನಲ್ಲಿ ನೆಡುವ ಮೂಲಕ ಸದ್ದಿಲ್ಲದೇ ಹಸಿರು ಕ್ರಾಂತಿ ಮಾಡಿದರು.

ಹಾಲಕ್ಕಿ ಸಮುದಾಯದಲ್ಲಿ ಹುಟ್ಟಿದ ಇವರು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಹಸಿರು ಬೆಳೆಸುವ ಕಾಯಕ ಮಾಡುತ್ತಾ ಸಾಗಿದರು.

ಅಳಿವಿನಂಚಿನ ಸಸ್ಯಗಳನ್ನು ಬೆಳೆಸಿದ ಕೀರ್ತಿ ಇವರದ್ದು, ಇವರ ಸಾಧನೆ ಗುರುತಿಸಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ.

  • Related Posts

    ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಗೆ ಬಂದು ಏಕಾಗ್ರತೆಯಿಂದ ಓದಬೇಕು ಡಾ.ಆನಂದ ಪಾಂಡುರಂಗಿ

    ಧಾರವಾಡ : ವ್ಯಕ್ತಿತ್ವ ವಿಕಸನಕ್ಕೆ ಬೇಕಾಗಿರುವ ಎಲ್ಲಾ ಚಟುವಟಿಕೆಗಳನ್ನು ಒದಗಿಸಿದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ಕಲಿಕೆ ನಿರಂತರವಾದ ಪ್ರಕ್ರಿಯೆ ವಿದ್ಯಾರ್ಥಿಗಳಿಗೆ ಗುರಿಬೇಕು ಕಾರ್ಯ ಯೋಜನೆ ಮಾಡಿಕೊಳ್ಳಬೇಕು ಸ್ಪಷ್ಟವಾದ ಗುರಿಯನ್ನು ಇಟ್ಟುಕೊಂಡು ಅಭ್ಯಾಸವನ್ನು ಆನಂದಿಸು, ಪರೀಕ್ಷೆಯನ್ನು ಆನಂದಿಸಿ ಬರುವ ಹೆಚ್ಚು ಕಮ್ಮಿ ಅಂಕಗಳು ಬಂದರು…

    ಪ್ರಥಮ ಕಿತ್ತೂರು ಕರ್ನಾಟಕ ಜಾಂಬೋರೇಟ್ ವ್ಯವಸ್ಥಿತವಾಗಿ ನಡೆಸಿ ಯಶಸ್ವಿಗೊಳಿಸಿ – ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಕರೆ

    ಧಾರವಾಡ ೦೫ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಧಾರವಾಡದ ವತಿಯಿಂದ ಇದೇ ದಿ.6 ರಿಂದ 10 ರವರೆಗೆ ಧಾರವಾಡ ತಾಲೂಕಿನ ದಡ್ಡಿಕಮಲಾಪೂರದ ಸಸ್ಯಚೇತನ ಜಿಲ್ಲಾ ತರಬೇತಿ ಕೇಂದ್ರದಲ್ಲಿ ನಡೆಯಲಿರುವ ವಿಭಾಗ ಮಟ್ಟದ ಪ್ರಥಮ ಕಿತ್ತೂರು ಕರ್ನಾಟಕ…

    RSS
    Follow by Email
    Telegram
    WhatsApp
    URL has been copied successfully!