ಕಾಂಗ್ರೆಸ್ಸಿನ ದುರಾಡಳಿತ, ಭ್ರಷ್ಟಾಚಾರದ ವಿರುದ್ಧ ಪ್ರಸ್ತಾಪ- ಆರ್.ಅಶೋಕ್

ಬೆಳಗಾವಿ: ಅನುದಾನದಲ್ಲಿ ತಾರತಮ್ಯ ಮತ್ತು ಇತರ ವಿಷಯಗಳ ಕುರಿತು ಇಲ್ಲಿನ ಅಧಿವೇಶನದಲ್ಲಿ ಚರ್ಚೆ ಮಾಡಲಿದ್ದೇವೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಅವರು ತಿಳಿಸಿದರು.
ಬೆಳಗಾವಿಯಲ್ಲಿ ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ವಿಧಾನಸಭೆ ಮತ್ತು ವಿಧಾನಪರಿಷತ್ತಿನ ಬಿಜೆಪಿ ಜನಪ್ರತಿನಿಧಿಗಳ ಸಭೆ ಇಂದು ಒಂದು ಗಂಟೆಗೂ ಹೆಚ್ಚು ಕಾಲ ನಡೆದಿದೆ ಎಂದು ಅವರು ತಿಳಿಸಿದರು. ಹೆಚ್ಚಿನ ಶಾಸಕರು ಅನುದಾನದ ತಾರತಮ್ಯ ಆಗುತ್ತಿದೆ ಎಂದು ತಿಳಿಸಿದ್ದಾರೆ ಎಂದರು.


ಅನುದಾನ ಇಲ್ಲದ ಕಾರಣ ರಸ್ತೆ ಸಮಸ್ಯೆ ಆಗಿದೆ. ಆಸ್ಪತ್ರೆಗಳಲ್ಲಿ ಔಷಧಿಗಳಿಲ್ಲ; ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ತಿಳಿಸಿದ್ದಾರೆ. ಅತಿವೃಷ್ಟಿ ಬಂದರೂ ಹಣ ಬಿಡುಗಡೆ ಮಾಡಿಲ್ಲ ಎಂದು ತಿಳಿಸಿದ್ದಾರೆ. ಇವೆಲ್ಲವುಗಳನ್ನು ಚರ್ಚೆಗೆ ತೆಗೆದುಕೊಳ್ಳಲು ಕೋರಿದ್ದಾರೆ. ಇದಲ್ಲದೆ, ಬಾಣಂತಿಯರ ಸಾವು, ಮಕ್ಕಳ ಸಾವಿನ ಕುರಿತು ಚರ್ಚಿಸಲು ನಿರ್ಧರಿಸಲಾಗಿದೆ ಎಂದರು.
ಬೆಳಗಾವಿ ಅಧಿವೇಶನ ಎಂದೊಡನೆ ಮಲೆನಾಡು ಪ್ರದೇಶದ ವಿಚಾರ ಚರ್ಚೆಗೆ ಬರುತ್ತಿಲ್ಲ ಎಂದಿದ್ದಾರೆ. ಅದನ್ನು ಕೂಡ ಚರ್ಚಿಸುತ್ತೇವೆ. ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ದುಡ್ಡು ಕೊಡದೆ ಏನು ಕೆಲಸವೂ ಆಗುತ್ತಿಲ್ಲ ಎಂದು ದೂರಿದ್ದಾರೆ. ಗುತ್ತಿಗೆದಾರರು ಲಂಚ ಕೊಟ್ಟು ಕೆಲಸ ಗುತ್ತಿಗೆ ಪಡೆಯುತ್ತಿದ್ದಾರೆ. ಶಾಸಕರಿಗೆ ಗೌರವ ಇಲ್ಲ ಎಂಬ ವಿಚಾರವೂ ಚರ್ಚೆ ಮಾಡಲು ಕೋರಿದ್ದಾರೆ ಎಂದು ಹೇಳಿದರು. ತಾರತಮ್ಯ ಮತ್ತು ಕೃಷ್ಣಾ ಯೋಜನೆಗೆ (ಯುಕೆಪಿ) ಹಣ ನೀಡದೆ ಇರುವ ಕುರಿತು ಕೂಡ ಚರ್ಚೆ ನಡೆದಿದ್ದು ಇವೆಲ್ಲವುಗಳನ್ನು ಅಧಿವೇಶನದಲ್ಲಿ ಚರ್ಚಿಸುತ್ತೇವೆ ಎಂದು ಹೇಳಿದರು.
ರಾಜ್ಯ ಸಹ ಉಸ್ತುವಾರಿ ಸುಧಾಕರ ರೆಡ್ಡಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಇದ್ದರು. ಒಟ್ಟಿಗೆ ಇರಲು ಸಹಮತ ವ್ಯಕ್ತವಾಗಿದೆ. ಇಂದಿನ ಸಭೆ ಮುಕ್ತವಾದ ವಾತಾವರಣದಲ್ಲಿ ನಡೆದಿದೆ. ಸಿಗುವ 5 ದಿನದಲ್ಲಿ ಕಾಂಗ್ರೆಸ್ಸಿನ ದುರಾಡಳಿತ, ಭ್ರಷ್ಟಾಚಾರದ ವಿರುದ್ಧ ಪ್ರಸ್ತಾಪಿಸಿ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಕೆಲಸ ಮಾಡುತ್ತೇವೆ ಎಂದು ವಿವರಿಸಿದರು.
ಯತ್ನಾಳ್, ರಮೇಶ್ ಜಾರಕಿಹೊಳಿ ಅವರು ನನ್ನ ಜೊತೆ ಫೋನ್ ಮಾಡಿ ಮಾತನಾಡಿದ್ದಾರೆ. ಈ ಸಭೆಗೆ ಬರಲಾಗುವುದಿಲ್ಲ; ಮುಂದಿನ ಬಾರಿ ಬರುವುದಾಗಿ ಹೇಳಿದ್ದಾರೆ. ಶಾಸಕರಿಗೆ ಸಮಸ್ಯೆಗಳಿದ್ದರೆ ಬಂದು ಮಾತನಾಡಿ ಎಂದು ಅಧ್ಯಕ್ಷರೂ ಹೇಳಿದ್ದಾರೆ ಎಂದು ತಿಳಿಸಿದರು. ಇವತ್ತಿನ ಅಸೆಂಬ್ಲಿಯಲ್ಲಿ ನಾವೆಲ್ಲರೂ ಒಟ್ಟಾಗಿ ಹೋಗಿದ್ದೇವೆ ಎಂದು ವಿವರ ನೀಡಿದರು.
ಪಂಚಮಸಾಲಿ ವಿಚಾರದಲ್ಲಿ ಸರಕಾರವನ್ನು ಬಗ್ಗುಬಡಿದು ಗೆಲುವು ಸಾಧಿಸಿದ್ದೇವೆ. ಅನುಮತಿಯೂ ಸಿಕ್ಕಿದೆ ಎಂದರು. ನಾಳೆ ವಕ್ಫ್ ಬೋರ್ಡ್ ಕುರಿತು ಚರ್ಚೆ ಇದೆ. ಬಳಿಕ ಪಂಚಮಸಾಲಿ ಹೋರಾಟದ ಜಾಗಕ್ಕೆ ಭೇಟಿ ಕೊಡಲಿದ್ದೇನೆ ಎಂದು ಹೇಳಿದರು. ಇದು ತುಘಲಕ್ ಆಡಳಿತ ಎಂದು ಅವರು ಟೀಕಿಸಿದರು.

  • Related Posts

    ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಗೆ ಬಂದು ಏಕಾಗ್ರತೆಯಿಂದ ಓದಬೇಕು ಡಾ.ಆನಂದ ಪಾಂಡುರಂಗಿ

    ಧಾರವಾಡ : ವ್ಯಕ್ತಿತ್ವ ವಿಕಸನಕ್ಕೆ ಬೇಕಾಗಿರುವ ಎಲ್ಲಾ ಚಟುವಟಿಕೆಗಳನ್ನು ಒದಗಿಸಿದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ಕಲಿಕೆ ನಿರಂತರವಾದ ಪ್ರಕ್ರಿಯೆ ವಿದ್ಯಾರ್ಥಿಗಳಿಗೆ ಗುರಿಬೇಕು ಕಾರ್ಯ ಯೋಜನೆ ಮಾಡಿಕೊಳ್ಳಬೇಕು ಸ್ಪಷ್ಟವಾದ ಗುರಿಯನ್ನು ಇಟ್ಟುಕೊಂಡು ಅಭ್ಯಾಸವನ್ನು ಆನಂದಿಸು, ಪರೀಕ್ಷೆಯನ್ನು ಆನಂದಿಸಿ ಬರುವ ಹೆಚ್ಚು ಕಮ್ಮಿ ಅಂಕಗಳು ಬಂದರು…

    ಪ್ರಥಮ ಕಿತ್ತೂರು ಕರ್ನಾಟಕ ಜಾಂಬೋರೇಟ್ ವ್ಯವಸ್ಥಿತವಾಗಿ ನಡೆಸಿ ಯಶಸ್ವಿಗೊಳಿಸಿ – ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಕರೆ

    ಧಾರವಾಡ ೦೫ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಧಾರವಾಡದ ವತಿಯಿಂದ ಇದೇ ದಿ.6 ರಿಂದ 10 ರವರೆಗೆ ಧಾರವಾಡ ತಾಲೂಕಿನ ದಡ್ಡಿಕಮಲಾಪೂರದ ಸಸ್ಯಚೇತನ ಜಿಲ್ಲಾ ತರಬೇತಿ ಕೇಂದ್ರದಲ್ಲಿ ನಡೆಯಲಿರುವ ವಿಭಾಗ ಮಟ್ಟದ ಪ್ರಥಮ ಕಿತ್ತೂರು ಕರ್ನಾಟಕ…

    RSS
    Follow by Email
    Telegram
    WhatsApp
    URL has been copied successfully!