ಕನಿಷ್ಠ ವೇತನ 50,000-00 ರೂಪಾಯಿ ನೀಡಲು ಅತಿಥಿ ಉಪನ್ಯಾಸಕರ ಮನವಿ

ಧಾರವಾಡ 17 : ಕರ್ನಾಟಕ ವಿಶ್ವವಿದ್ಯಾಲಯದ ಸಹಾಯಕ ಮತ್ತು ಅತಿಥಿ ಉಪನ್ಯಾಸಕರ ಕನಿಷ್ಠ (50,000-00) ರೂಪಾಯಿ ವೇತನ ಮತ್ತು ಸೇವಾ ಭದ್ರತೆ ನೀಡುವ ಕುರಿತು ಅಧ್ಯಕ್ಷ ಡಾ ಶರಣು ಮುಷ್ಟಿಗೇರಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಉತ್ತರ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಯ ಆಶಯದೊಂದಿಗೆ ಆರಂಭವಾದ ಈ ಅಧಿವೇಶನದಲ್ಲಿ ಕರ್ನಾಟಕ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿಯೇ ಅತಿ ದೊಡ್ಡ ಜ್ಞಾನ ಕೇಂದ್ರವಾದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸುಮಾರು 600 ಕ್ಕೂ ಹೆಚ್ಚು ಸಹಾಯಕ ಮತ್ತು ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದು ವಿಶ್ವವಿದ್ಯಾಲಯಗಳ ಅನುದಾನ ಆಯೋಗವು (ಯು.ಜಿ.ಸಿ)ಯು ಕನಿಷ್ಠ ವೇತನ 50,000-00 ರೂಪಾಯಿ ನೀಡಬೇಕೆಂದು ಆದೇಶಿಸಿರುತ್ತದೆ. ಆದರೆ ಕರ್ನಾಟಕ ವಿಶ್ವವಿದ್ಯಾಲಯ ನಮ್ಮನ್ನು ಶೈಕ್ಷಣಿಕ ಅರ್ಹತೆಗಳನ್ವಯ ನೇಮಕ ಮಾಡಿಕೊಂಡಿದೆ. ನಾವೆಲ್ಲರೂ ಸುಮಾರು 25 ವರ್ಷಗಳಿಂದ ಭೋಧನಾ ಕಾರ್ಯ ನಿರ್ವಹಿಸುತ್ತಿದ್ದೇವೆ. ವಿಶ್ವವಿದ್ಯಾಲಯದ ಸರ್ವಾಂಗೀಣ ಅಭಿವೃದ್ಧಿ ಕಾರ್ಯಗಳಲ್ಲಿ ನಿರತರಾಗಿದ್ದೇವೆ.

ಯು.ಜಿ.ಸಿ ಮಾರ್ಗಸೂಚಿಯಂತೆ, ರಾಜ್ಯದ ಇತರೆ ವಿಶ್ವವಿದ್ಯಾಲಯಗಳು ನೀಡುತ್ತಿರುವ ಕನಿಷ್ಠ ವೇತನವನ್ನು ನಮಗೂ ಸಹ ನೀಡುವಂತೆ ನಿರ್ದೇಶನ ನೀಡಿ ಈ ತಾರತಮ್ಯವನ್ನು ಸರಿಪಡಿಸಿ, ನಮಗೆ ನ್ಯಾಯ ದೊರಕುವಂತೆ ಸಂಬಂಧಿಸಿದ ಇಲಾಖೆಗೆ ತಾವುಗಳು ಶಿಪಾರಸ್ಸು ಮಾಡಬೇಕೆಂದು ಸರ್ಕಾರಕ್ಕೆ ವಿನಯ ಪೂರ್ವಕವಾಗಿ ವಿನಂತಿಸಿಕೊಳ್ಳುತ್ತೇವೆ ಎಂದರು .
ಪತ್ರಿಕಾಗೋಷ್ಠಿಯಲ್ಲಿ ಡಾ ಮಹಾದೇವ ಅರೇರ,ಡಾ ಮಹೇಂದ್ರ ಹರಿಹರ, ಡಾ ಎಮ್ ಭ್ಯಾಲಾಳ,ಡಾ ರಂಗಪ್ಪ ಎಂ ಎನ್,ಡಾ ರಾಮಕೃಷ್ಣ,ವಿಪುಲಾ ಮಹೇಂದ್ರಕರ,ಡಾ ಪತ್ರೆಮ್ಮ ಧಾರವಾಡ ಇದ್ದರು.

  • Related Posts

    ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಗೆ ಬಂದು ಏಕಾಗ್ರತೆಯಿಂದ ಓದಬೇಕು ಡಾ.ಆನಂದ ಪಾಂಡುರಂಗಿ

    ಧಾರವಾಡ : ವ್ಯಕ್ತಿತ್ವ ವಿಕಸನಕ್ಕೆ ಬೇಕಾಗಿರುವ ಎಲ್ಲಾ ಚಟುವಟಿಕೆಗಳನ್ನು ಒದಗಿಸಿದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ಕಲಿಕೆ ನಿರಂತರವಾದ ಪ್ರಕ್ರಿಯೆ ವಿದ್ಯಾರ್ಥಿಗಳಿಗೆ ಗುರಿಬೇಕು ಕಾರ್ಯ ಯೋಜನೆ ಮಾಡಿಕೊಳ್ಳಬೇಕು ಸ್ಪಷ್ಟವಾದ ಗುರಿಯನ್ನು ಇಟ್ಟುಕೊಂಡು ಅಭ್ಯಾಸವನ್ನು ಆನಂದಿಸು, ಪರೀಕ್ಷೆಯನ್ನು ಆನಂದಿಸಿ ಬರುವ ಹೆಚ್ಚು ಕಮ್ಮಿ ಅಂಕಗಳು ಬಂದರು…

    ಪ್ರಥಮ ಕಿತ್ತೂರು ಕರ್ನಾಟಕ ಜಾಂಬೋರೇಟ್ ವ್ಯವಸ್ಥಿತವಾಗಿ ನಡೆಸಿ ಯಶಸ್ವಿಗೊಳಿಸಿ – ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಕರೆ

    ಧಾರವಾಡ ೦೫ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಧಾರವಾಡದ ವತಿಯಿಂದ ಇದೇ ದಿ.6 ರಿಂದ 10 ರವರೆಗೆ ಧಾರವಾಡ ತಾಲೂಕಿನ ದಡ್ಡಿಕಮಲಾಪೂರದ ಸಸ್ಯಚೇತನ ಜಿಲ್ಲಾ ತರಬೇತಿ ಕೇಂದ್ರದಲ್ಲಿ ನಡೆಯಲಿರುವ ವಿಭಾಗ ಮಟ್ಟದ ಪ್ರಥಮ ಕಿತ್ತೂರು ಕರ್ನಾಟಕ…

    RSS
    Follow by Email
    Telegram
    WhatsApp
    URL has been copied successfully!