ಕೆಎಂಡಿಸಿ ಮೂಲಕ ವಿದೇಶಿ ಶಿಕ್ಷಣಕ್ಕೆ ರೂ. 20 ಲಕ್ಷ ಸಾಲ – ಕೊಲಾರದಲ್ಲಿ ಸೈಯದ್ ಇಫ್ತಖಾರ್‌ಗೆ ಚೆಕ್ ವಿತರಣೆ

ಕೋಲಾರ 16  : ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆದುಕೊಳ್ಳಲು ಉತ್ಸುಕವಾಗಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ಕೆಎಂಡಿಸಿ)ನ ಶೈಕ್ಷಣಿಕ ಸಾಲ ಯೋಜನೆಯಡಿ, ಕೋಲಾರದ ಸೈಯದ್ ಇಫ್ತಖಾರ್ ಅವರಿಗೆ ರೂ. 20 ಲಕ್ಷಗಳ ಚೆಕ್ ವಿತರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ವಸತಿ, ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಚೆಕ್ ಹಸ್ತಾಂತರಿಸಿದರು.

ಈ ವೇಳೆ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್ ಅವರು, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಪ್ರಮುಖ ಧ್ಯೇಯವಾಗಿದೆ. ವಿದೇಶದಲ್ಲಿ ಓದಲು ಬಯಸುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಜವಾಬ್ದಾರಿ ನಮ್ಮದು, ಎಂದು ಹೇಳಿದರು.

ಈ ತರಹದ ಕಾರ್ಯಕ್ರಮಗಳ ಮೂಲಕ ಹೆಚ್ಚು ಹೆಚ್ಚು ವಿದ್ಯಾರ್ಥಿಗಳಿಗೆ ನಂಟು ನೀಡುವ ಉದ್ದೇಶವಿದೆ ಎಂದೂ ಅವರು ಹೇಳಿದರು.

ವಿದೇಶಿ ಶಿಕ್ಷಣ ಸಾಲದ ಅರ್ಹತೆ, ಪ್ರಯೋಜನಗಳು ಹಾಗೂ ಮುಂದಿನ ಯೋಜನೆಗಳ ಕುರಿತು ಮಾಹಿತಿ ನೀಡಲಾಯಿತು. ಈ ಯೋಜನೆಯಿಂದ ಇನ್ನಷ್ಟು ವಿದ್ಯಾರ್ಥಿಗಳಿಗೆ ಲಾಭವಾಗಬೇಕೆಂಬ ಆಶಯವನ್ನೂ ವ್ಯಕ್ತಪಡಿಸಲಾಯಿತು.

ಈ ವೇಳೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕ ಜಿಲಾನಿ ಮೊಕಾಶಿ, ಕೆಎಂಡಿಸಿ ಪ್ರಧಾನ ವ್ಯವಸ್ಥಾಪಕ ಡಾ. ಅಫ್ಜಲ್ ಪಾಷ, ಕೋಲಾರ ಜಿಲ್ಲಾ ಕೆಎಂಡಿಸಿ ವ್ಯವಸ್ಥಾಪಕ ಶಿರೀನ್ ತಾಜ್, ಕೆಎಂಡಿಸಿ ನಿರ್ದೇಶಕ ಅಬ್ದುಲ್ ಖಯ್ಯೂಮ್, ಸಿಬ್ಬಂದಿಗಳಾದ ಸಲೀಂ ಪಾಷ ಹಾಗೂ ವಿವಿಧ ಅಲ್ಪಸಂಖ್ಯಾತರ ನಾಯಕರು ಉಪಸ್ಥಿತರಿದ್ದರು.