ಪಥಸಂಚಲನಕ್ಕೆ ಅತಿಥಿಯಾಗಿ ಶಿವಯೋಗಿ ಹಾವೇರಿ ಆಯ್ಕೆ

ಧಾರವಾಡ 25 : ದೆಹಲಿಯ ಕರ್ತವ್ಯ ಪಥ ನಲ್ಲಿ ನಡೆಯಲಿರುವ 76ನೇ ಗಣರಾಜ್ಯೋತ್ಸವ ಪಥಸಂಚಲನದ ವೀಕ್ಷಣೆಗೆ ವಿಶೇಷ ಅತಿಥಿಯಾಗಿ ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ ರಾಷ್ಟ್ರೀಯ ಸೇವಾ ಯೋಜನಾ ಕೋಶದಿಂದ ವಿದ್ಯಾರ್ಥಿ ಕು.ಶಿವಯೋಗಿ ಹಾವೇರಿ ಆಯ್ಕೆಯಾಗಿರುತ್ತನೆಂದು ರಾಷ್ಟ್ರೀಯ ಸೇವಾ ಯೋಜನಾ ಕೋಶದ ಕಾರ್ಯಕ್ರಮ ಸಂಯೋಜನಾಧಿಕಾರಿ ಪ್ರೊ. ಎಂ. ಬಿ. ದಳಪತಿ ರವರು ತಿಳಿಸಿದ್ದಾರೆ. ಸದರಿ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ, ಪ್ರಧಾನಮಂತ್ರಿ ಹಾಗೂ ವಿಶೇಷ ಅತಿಥಿಯಾಗಿ ಇಂಡೊನೆಷ್ಯಾದ ಅಧ್ಯಕ್ಷರು ಮತ್ತು ಮಂತ್ರಿ ಮಂಡಲದ ಎಲ್ಲಾ ಸದಸ್ಯರುಗಳು, ಗಣ್ಯರು ಭಾಗಿಯಾಗಲಿದ್ದಾರೆ. ಪಥಸಂಚಲನಕ್ಕೆ ಆಯ್ಕೆಯಾದ ಈ ವಿದ್ಯಾರ್ಥಿಗೆ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿಗಳು, ಕುಲಸಚಿವರು, ವಿಶ್ವವಿದ್ಯಾಲಯದ ಎನ್‌.ಎಸ್.ಎಸ್. ಸಂಯೋಜನ ಅಧಿಕಾರಿಗಳು, ಅಭಿನಂದಿಸಿ ಹರ್ಷವನ್ನು ವ್ಯಕ್ತಪಡಿಸಿದ್ದಾರೆ.

  • Related Posts

    ಫೆ 14 ರಂದು ಬಿಸಿಯೂಟ ಕಾರ್ಮಿಕರ ವೇತನ ಹೆಚ್ಚಿಸಲು ಆಗ್ರಹಿಸಿ

    ಧಾರವಾಡ 11 :ಎಐಯುಟಿಯುಸಿ ಕೇಂದ್ರ ಕಾರ್ಮಿಕ ಸಂಘಟನೆಗೆ ಸೇರಿದ ಕರ್ನಾಟಕ ರಾಜ್ಯ ಸಂಯುಕ್ತ ಬಿಸಿಯೂಟ ಕಾರ್ಮಿಕರ ಸಂಘ(ರಿ)ದ ಧಾರವಾಡ ಜಿಲ್ಲಾ ಸಮಿತಿ ವತಿಯಿಂದ ಇಂದು ಬಿಸಿಯೂಟ ಕಾರ್ಮಿಕರಿಗೆ ಇಂದಿನ ಬೆಲೆಯೇರಿಕೆಗೆ ಅನುಗುಣವಾಗಿ ವೇತನ ಹೆಚ್ಚಳ ಮಾಡಬೇಕೆಂದು ಆಗ್ರಹಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ…

    ಗ್ರಾಮ ಆಡಳಿತ ಅಧಿಕಾರಿಗಳ‌ ಸಂಘದ ಮುಷ್ಕರ

    ಧಾರವಾಡ11 :  ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ನಗರದ ತಹಶೀಲ್ದಾರ‌ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ನೀಡಿದ್ದ ಕರೆಯ ಮೇರೆಗೆ ಗ್ರಾಮ ಆಡಳಿತ…

    RSS
    Follow by Email
    Telegram
    WhatsApp
    URL has been copied successfully!