ಅದ್ದೂರಿಯಾಗಿ ನೆರವೇರಿದ ಶ್ರೀ ಬನಶಂಕರಿ ದೇವಿ ಪಲಕ್ಕಿ ಉತ್ಸವ – ಜಾತ್ರಾ ಮಹೋತ್ಸವ.
ಧಾರವಾಡ : ಬನದ ಹುಣ್ಣಿಮೆ ನಿಮಿತ್ತವಾಗಿ ಶಹರದ ಕಾಮನಕಟ್ಟಿ ಚರಂತಿಮಠ ಗಾರ್ಡನದಲ್ಲಿರುವ ಶ್ರೀ ಬನಶಂಕರಿ ದೇವಸ್ಥಾನದ ಆವರಣದಲ್ಲಿ ಇಂದು ಶ್ರೀ ಬನಶಂಕರಿ ದೇವಿ ಪಲ್ಲಕ್ಕಿ ಉತ್ಸವ ಹಾಗೂ ಜಾತ್ರಾ ಮಹೋತ್ಸವ ಸಂಭ್ರಮದಿಂದ ಜರುಗಿತು.
ಬೆಳಗ್ಗೆ ಕಾಕಡಾರತಿ, ಅಭಿಷೇಕ, ಕುಂಕುಮಾರ್ಚನೆ , ಹೋಮ, ಹವನ ಹಾಗೂ ದೇವಿಗೆ ವಿಶೇಷ ಪೂಜೆ ಮಂತ್ರಪಠಣ ನಡೆದವು. ಶಹರ ಪೊಲೀಸ್ ಆಯುಕ್ತ ಪ್ರಶಾಂತ್ ಸಿದ್ದನಗೌಡರ ಪಲ್ಲಕ್ಕಿ ಉತ್ಸವದ ಪೂಜೆ ನೇರವೇರಿಸಿದರು. ಶ್ರೀ ಧರ್ಮಶಾಸ್ರ ಸಮಿತಿಯ ರಮೇಶ್ ಪಾತ್ರೊಟ್ ಗುರೂಜಿ ಇವರಿಂದ ಧಾರ್ಮಿಕ ವಿಧಿ- ವಿಧಾನ ಕಾರ್ಯಕ್ರಮ ಜರುಗಿತು.
ನಂತರ ನಡೆದ ಪಲ್ಲಕ್ಕಿ ಉತ್ಸವವು ವಿವಿಧ ಬಡಾವಣೆ ಮೂಲಕ ಸಂಚರಿಸಿ ಮರಳಿ ದೇವಸ್ಥಾನ ತಲುಪಿತು. ಈ ಸಂದರ್ಭದಲ್ಲಿ ಜಾಂಝ, ಭಜನೆ, ಕಲಾ ಮೇಳಗಳು ಭಾಗವಹಿಸಿ ಜಾತ್ರಾ ಮಹೋತ್ಸವಕ್ಕೆ ಮೆರಗು ನೀಡಿದವು. ಸಂಚಾರಿ ಪೋಲೀಸ್ ಠಾಣೆಯ ಅಧಿಕಾರಿ ವಿರೇಶ ಬಳ್ಳಾರಿ ಪಲ್ಲಕ್ಕಿ ಉತ್ಸವಕ್ಕೆ ಹಾಗೂ ಸೀತಾ ಎಸ್ ಕಟಗಿ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದರು.
ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಶಿವಾನಂದ ಲೋಲೆನವರ, ಅಶೋಕ ದೇವಾಂಗ್. ರಾಜು ಢವಳೆ. ವಿಮಲಾ ಢವಳೆ. ಶಿವಶಂಕರ ಢವಳೆ. ಪುಷ್ಪಾ ನವಲಗುಂದ. ಸುನಿತಾ ಲೋಲೆನವರ. ಲೀಲಾವತಿ ಸಾಂಬ್ರಾಣಿ. ಮಂಗಲಾ ಸತ್ತಿಗೇರಿ. ಗೀತಾ ನಾಗಣ್ಣವರ. ರವಿಕುಮಾರ್ ಹಾಗೂ ಆಡಳಿತ ಮಂಡಳಿ ಪದಾಧಿಕಾರಿಗಳು ಪಾಲ್ಗೊಂಡಿದ್ದರು.





