ಉಜ್ವಲ ಭವಿಷ್ಯಕ್ಕೆ ಗಣ್ಯರ ಸಾಧನೆಯೇ ದಾರಿದೀಪ

ಹುಬ್ಬಳ್ಳಿ 27 : ಉಜ್ವಲ ಭವಿಷ್ಯಕ್ಕೆ ಗಣ್ಯರ ಸಾಧನೆಯು ನಮಗೆ ದಾರಿದೀಪವಾಗಬೇಕು ಎಂದು ದೇವಕಿ ಯೋಗಾನಂದ ಹೇಳಿದರು.
ಹು- ಧಾ ಮಹಾನಗರ ಪಾಲಿಕೆಯ ವಾಡ್೯ ನಂ 27 ರ ನವನಗರದ ಭಗನಿ ನೀವೆದಿತಾ ವಿದ್ಯಾಲಯದಲ್ಲಿ ಎರ್ಪಡಿಸಲಾಗಿದ್ದ ಗಣರಾಜ್ಯೋತ್ಸವ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪಥ ಸಂಚಲನ ನಡೆಸಿದರು. 1 ಮತ್ತು 2 ನೇ ತರಗತಿ ಮಕ್ಕಳಿಂದ ಛದ್ಮವೇಷ ಪ್ರದರ್ಶನ ಮಾಡಿದರು.
5 ನೇ ತರಗತಿ ಮಕ್ಕಳು ದೇಶಭಕ್ತಿಗೀತೆ ಹಾಡನ್ನು ಹಾಡಿದರು. 6 ನೇ ಮತ್ತು 7 ನೇ ತರಗತಿ ಮಕ್ಕಳು ಭಾಷಣ
ಮಾಡಿದರು. 3 ನೇ ತರಗತಿ ಮಕ್ಕಳು ದೇಶಭಕ್ತಿ ನೃತ್ಯವನ್ನು ಮಾಡಿ ಜನ ಮೆಚ್ಚುಗೆ ನಡೆಸಿದರು.
ಪ್ರೌಢ ಶಾಲೆಯ ಮಕ್ಕಳು ಕನ್ನಡ, ಇಂಗ್ಲೀಷ್ ಮತ್ತು ಹಿಂದಿ ಭಾಷೆಯಲ್ಲಿ ಭಾಷಣವನ್ನು ಮಾಡಿದರು. 10 ನೇ ತರಗತಿ ಮಕ್ಕಳು ದೇಶಭಕ್ತಿ ಗೀತೆಯನ್ನು ಹಾಡಿದರು. 8 ಮತ್ತು 9 ನೇ ತರಗತಿ ಮಕ್ಕಳು ಯೋಧರ ನೃತ್ಯವನ್ನು ಅದ್ಭುತವಾಗಿ ಮಾಡಿದರು.
ಈ ಕಾರ್ಯಕ್ರಮದಲ್ಲಿ ಎರಡು ವಿಭಾಗದ ಮುಖ್ಯ ಶಿಕ್ಷಕರು, ಶಾಲಾ ಸುಧಾರಣಾ ಸಮಿತಿ ಅಧ್ಯಕ್ಷರು, ಸಮಿತಿಯ ಸದಸ್ಯರು, ಎಲ್ಲ ಶಿಕ್ಷಕರು, ಮಕ್ಕಳು ಮತ್ತು ಪಾಲಕರು ಉಪಸ್ಥಿತರಿದ್ದರು. ಜಿ.ಜಿ.ಹೆಗಡೆ ಅವರು ಸ್ವಾಗತ ಸಹನಾ ಓಂಕಾರ ಶಿಕ್ಷಕಿಯವರು ನಿರೂಪಣೆ, ಚೇತನಾ ಪಟ್ಟಣಶೆಟ್ಟಿ ವಂದನಾರ್ಪಣೆ ಮಾಡಿದರು.

  • Related Posts

    ಫೆ 14 ರಂದು ಬಿಸಿಯೂಟ ಕಾರ್ಮಿಕರ ವೇತನ ಹೆಚ್ಚಿಸಲು ಆಗ್ರಹಿಸಿ

    ಧಾರವಾಡ 11 :ಎಐಯುಟಿಯುಸಿ ಕೇಂದ್ರ ಕಾರ್ಮಿಕ ಸಂಘಟನೆಗೆ ಸೇರಿದ ಕರ್ನಾಟಕ ರಾಜ್ಯ ಸಂಯುಕ್ತ ಬಿಸಿಯೂಟ ಕಾರ್ಮಿಕರ ಸಂಘ(ರಿ)ದ ಧಾರವಾಡ ಜಿಲ್ಲಾ ಸಮಿತಿ ವತಿಯಿಂದ ಇಂದು ಬಿಸಿಯೂಟ ಕಾರ್ಮಿಕರಿಗೆ ಇಂದಿನ ಬೆಲೆಯೇರಿಕೆಗೆ ಅನುಗುಣವಾಗಿ ವೇತನ ಹೆಚ್ಚಳ ಮಾಡಬೇಕೆಂದು ಆಗ್ರಹಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ…

    ಗ್ರಾಮ ಆಡಳಿತ ಅಧಿಕಾರಿಗಳ‌ ಸಂಘದ ಮುಷ್ಕರ

    ಧಾರವಾಡ11 :  ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ನಗರದ ತಹಶೀಲ್ದಾರ‌ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ನೀಡಿದ್ದ ಕರೆಯ ಮೇರೆಗೆ ಗ್ರಾಮ ಆಡಳಿತ…

    RSS
    Follow by Email
    Telegram
    WhatsApp
    URL has been copied successfully!