ಧಾರವಾಡ  10 : ರಜೆಯ ಮೇಲೆ ಬೇರೆ ಊರಿಗೆ ತೆರಳಿದ್ದ ಇಬ್ಬರು ಶಿಕ್ಷಕರ ಮನೆಗಳಿಗೆ ಕನ್ನ ಹಾಕಿದ ಕಳ್ಳರು ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ನಗದು ಹಣ ದೋಚಿಕೊಂಡು ಪರಾರಿಯಾದ ಘಟನೆ ಧಾರವಾಡ ತಾಲೂಕಿನ ಕ್ಯಾರಕೊಪ್ಪ ಗ್ರಾಮದ ಹತ್ತಿರ ನಡೆದಿದೆ.

ಕ್ಯಾರಕೊಪ್ಪ ಗ್ರಾಮದ ರಸ್ತೆಯಲ್ಲಿರುವ ಲೋಕನಾಥ್ ಮತ್ತು ಸೋಮನಗೌಡ ಪಾಟೀಲ್ ಎನ್ನುವವರ ಮನೆಯಲ್ಲೇ ಕಳ್ಳತನವಾಗಿದೆ.

ಇವರಿಬ್ಬರು ಶಿಕ್ಷಕರಾಗಿದ್ದು , ಕಳೆದ ಎರಡು ದಿನಗಳ ಹಿಂದೆ ರಜೆ ಇರುವ ಕಾರಣ ಊರಿಗೆ ಹೋಗಿದ್ದರು. ಶಿಕ್ಷಕರ ಮನೆಯಲ್ಲಿದ್ದ 70 ಗ್ರಾಂ ಚಿನ್ನಾಭರಣ ಸೇರಿ 1.20 ಲಕ್ಷ ಹಣ ಕಳ್ಳರು ಕಳ್ಳತಮಾಡಿದ್ದಾರೆ.

ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.