ವೀರಭದ್ರೇಶ್ವರ ಜಾತ್ರಾ ಮಹೋತ್ಸವ

ಧಾರವಾಡ ೧೪ : ಧಾರವಾಡ ಮೃತ್ಯುಂಜಯ ನಗರದ ಕೊಟ್ಟಣದ ಓಣಿಯ ಶ್ರೀ ವೀರಭದ್ರೇಶ್ವರ ಜಾತ್ರಾಮಹೋತ್ಸವದ ಮೊದಲ ದಿನದ ಕಾರ್ಯಕ್ರಮ ಗುಗ್ಗಳ ಮಹೋತ್ಸವವು ಜರುಗಿತು.
ಮುಂಜಾನೆ ಒಂಭತ್ತು ಗಂಟೆಗೆ ಅಮ್ಮಿನಭಾವಿಯ ಶ್ರೀಗಳಾದ ಅಭಿನವ ಶಾಂತಲಿಂಗ ಶಿವಾಚರ‍್ಯ ಮಹಾಸ್ವಾಮಿಗಳು, ಸುಳ್ಳದ ಶ್ರೀಗಳಾದ ಶಿವಸಿದ್ಧರಾಮೇಶ್ವರ ಶಿವಾಚರ‍್ಯ ಮಹಾಸ್ವಾಮಿಗಳು ಹಾಗೂ ಹೂವಿನಹಡಗಲಿ ಶ್ರೀಗಳಾದ ಚನ್ನವೀರ ಮಹಾಸ್ವಾಮಿಗಳು ಚಾಲನೆ ನೀಡಿದರು.

ಗುತ್ತಲದ ಪ್ರಸಿದ್ಧ ಪುರವಂತರು ಓಡಪುಗಳನ್ನು ಹೇಳುತ್ತಾ ವಿವಿಧ ವಾದ್ಯ, ಮುತೈದೆಯರು ಆರತಿಗಳೊಂದಿಗೆ ಭಾಗವಹಿಸಿದರು.

ಗುಗ್ಗಳದ ಮೆರವಣಿಗೆಯು ದೇವಸ್ಥಾನದಿಂದ ಆರಂಭಗೊಂಡು ಸವದತ್ತಿ ರಸ್ತೆ, ತೊಟ್ಟಿಗೇರ ಓಣಿ, ಮೂರುಸಾವಿರ ಮಠ ರಸ್ತೆ, ಡಿಪೋ ರ‍್ಕಲ್ ಮುಖಂತರ, ಅರಿಗೇರಿ ಓಣಿ, ಬಣಗಾರ ಓಣಿ, ಮುರುಘಾಮಠಕ್ಕೆ ಬಂದು ಪೂಜೆ ಸಲ್ಲಿಸಿ, ನಂತರ ಶ್ರೀ ವೀರಭದ್ರೇಶ್ವರ ದೇವಸ್ಥಾನಕ್ಕೆ ಆಗಮಿಸಿ, ನೂರಾರು ಭಕ್ತರು ಕೆಂಡ ಹಾಯುವದರ ಮುಖಾಂತರ ಗುಗ್ಗಳ ಸಂಪನ್ನಗೊಂಡಿತು. ತದನಂತರ ಸಾವಿರಾರು ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ವೀರಭದ್ರೇಶ್ವರ ದೇವಸ್ಥಾನದ ಅಧ್ಯಕ್ಷ ಅರವಿಂದ ಏಗನಗೌಡರ, ಮೃತ್ಯುಂಜಯ ಸಿದ್ನಾಳ, ದೀಪಕ ಇಂಡಿ, ಸಿದ್ದಪ್ಪ ಕರಡಿಗುಡ್ಡ, ಈಶ್ವರ ಮಾಲಗಾರ, ಮಹಾಂತೇಶ ಕುರಟ್ಟಿದೇಸಾಯಿ,ಸುರೇಶ ಅರಕೇರಿ,ಮಹಾಂತೇಶ ಗೊರವನಕೊಳ್ಳ, ಸೋಮಣ್ಣ ಗೋಡಿಕಟ್ಟಿ, ಶಿವಯೋಗಿ ಹಂಚಿನಾಳ, ಗುರುಸಿದ್ದಪ್ಪ ಭಾವಿಕಟ್ಟಿ, ಪ್ರಭು ಕಲ್ಲಾಪುರ ಸೇರಿದಂತೆ ಸಾವಿರಾರು ಭಕ್ತರು ಭಾಗವಹಿಸಿದ್ದರು. ಮಹಾಪ್ರಸಾದ ವ್ಯವಸ್ಥೆಯ ಜವಾಬ್ದಾರಿಯನ್ನು ಮೃತ್ಯುಂಜಯ ಯುವಕ ಮಂಡಳದ ಸದಸ್ಯರು ವಹಿಸಿಕೊಂಡಿದ್ದರು.

  • Related Posts

    ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಗೆ ಬಂದು ಏಕಾಗ್ರತೆಯಿಂದ ಓದಬೇಕು ಡಾ.ಆನಂದ ಪಾಂಡುರಂಗಿ

    ಧಾರವಾಡ : ವ್ಯಕ್ತಿತ್ವ ವಿಕಸನಕ್ಕೆ ಬೇಕಾಗಿರುವ ಎಲ್ಲಾ ಚಟುವಟಿಕೆಗಳನ್ನು ಒದಗಿಸಿದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ಕಲಿಕೆ ನಿರಂತರವಾದ ಪ್ರಕ್ರಿಯೆ ವಿದ್ಯಾರ್ಥಿಗಳಿಗೆ ಗುರಿಬೇಕು ಕಾರ್ಯ ಯೋಜನೆ ಮಾಡಿಕೊಳ್ಳಬೇಕು ಸ್ಪಷ್ಟವಾದ ಗುರಿಯನ್ನು ಇಟ್ಟುಕೊಂಡು ಅಭ್ಯಾಸವನ್ನು ಆನಂದಿಸು, ಪರೀಕ್ಷೆಯನ್ನು ಆನಂದಿಸಿ ಬರುವ ಹೆಚ್ಚು ಕಮ್ಮಿ ಅಂಕಗಳು ಬಂದರು…

    ಪ್ರಥಮ ಕಿತ್ತೂರು ಕರ್ನಾಟಕ ಜಾಂಬೋರೇಟ್ ವ್ಯವಸ್ಥಿತವಾಗಿ ನಡೆಸಿ ಯಶಸ್ವಿಗೊಳಿಸಿ – ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಕರೆ

    ಧಾರವಾಡ ೦೫ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಧಾರವಾಡದ ವತಿಯಿಂದ ಇದೇ ದಿ.6 ರಿಂದ 10 ರವರೆಗೆ ಧಾರವಾಡ ತಾಲೂಕಿನ ದಡ್ಡಿಕಮಲಾಪೂರದ ಸಸ್ಯಚೇತನ ಜಿಲ್ಲಾ ತರಬೇತಿ ಕೇಂದ್ರದಲ್ಲಿ ನಡೆಯಲಿರುವ ವಿಭಾಗ ಮಟ್ಟದ ಪ್ರಥಮ ಕಿತ್ತೂರು ಕರ್ನಾಟಕ…

    RSS
    Follow by Email
    Telegram
    WhatsApp
    URL has been copied successfully!