ಉಜ್ವಲ ಭವಿಷ್ಯಕ್ಕೆ ಗಣ್ಯರ ಸಾಧನೆಯೇ ದಾರಿದೀಪ

ಹುಬ್ಬಳ್ಳಿ 27 : ಉಜ್ವಲ ಭವಿಷ್ಯಕ್ಕೆ ಗಣ್ಯರ ಸಾಧನೆಯು ನಮಗೆ ದಾರಿದೀಪವಾಗಬೇಕು ಎಂದು ದೇವಕಿ ಯೋಗಾನಂದ ಹೇಳಿದರು.
ಹು- ಧಾ ಮಹಾನಗರ ಪಾಲಿಕೆಯ ವಾಡ್೯ ನಂ 27 ರ ನವನಗರದ ಭಗನಿ ನೀವೆದಿತಾ ವಿದ್ಯಾಲಯದಲ್ಲಿ ಎರ್ಪಡಿಸಲಾಗಿದ್ದ ಗಣರಾಜ್ಯೋತ್ಸವ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪಥ ಸಂಚಲನ ನಡೆಸಿದರು. 1 ಮತ್ತು 2 ನೇ ತರಗತಿ ಮಕ್ಕಳಿಂದ ಛದ್ಮವೇಷ ಪ್ರದರ್ಶನ ಮಾಡಿದರು.
5 ನೇ ತರಗತಿ ಮಕ್ಕಳು ದೇಶಭಕ್ತಿಗೀತೆ ಹಾಡನ್ನು ಹಾಡಿದರು. 6 ನೇ ಮತ್ತು 7 ನೇ ತರಗತಿ ಮಕ್ಕಳು ಭಾಷಣ
ಮಾಡಿದರು. 3 ನೇ ತರಗತಿ ಮಕ್ಕಳು ದೇಶಭಕ್ತಿ ನೃತ್ಯವನ್ನು ಮಾಡಿ ಜನ ಮೆಚ್ಚುಗೆ ನಡೆಸಿದರು.
ಪ್ರೌಢ ಶಾಲೆಯ ಮಕ್ಕಳು ಕನ್ನಡ, ಇಂಗ್ಲೀಷ್ ಮತ್ತು ಹಿಂದಿ ಭಾಷೆಯಲ್ಲಿ ಭಾಷಣವನ್ನು ಮಾಡಿದರು. 10 ನೇ ತರಗತಿ ಮಕ್ಕಳು ದೇಶಭಕ್ತಿ ಗೀತೆಯನ್ನು ಹಾಡಿದರು. 8 ಮತ್ತು 9 ನೇ ತರಗತಿ ಮಕ್ಕಳು ಯೋಧರ ನೃತ್ಯವನ್ನು ಅದ್ಭುತವಾಗಿ ಮಾಡಿದರು.
ಈ ಕಾರ್ಯಕ್ರಮದಲ್ಲಿ ಎರಡು ವಿಭಾಗದ ಮುಖ್ಯ ಶಿಕ್ಷಕರು, ಶಾಲಾ ಸುಧಾರಣಾ ಸಮಿತಿ ಅಧ್ಯಕ್ಷರು, ಸಮಿತಿಯ ಸದಸ್ಯರು, ಎಲ್ಲ ಶಿಕ್ಷಕರು, ಮಕ್ಕಳು ಮತ್ತು ಪಾಲಕರು ಉಪಸ್ಥಿತರಿದ್ದರು. ಜಿ.ಜಿ.ಹೆಗಡೆ ಅವರು ಸ್ವಾಗತ ಸಹನಾ ಓಂಕಾರ ಶಿಕ್ಷಕಿಯವರು ನಿರೂಪಣೆ, ಚೇತನಾ ಪಟ್ಟಣಶೆಟ್ಟಿ ವಂದನಾರ್ಪಣೆ ಮಾಡಿದರು.

  • Related Posts

    ಮಾರುಕಟ್ಟೆಯ ಹಮಾಲರ ಸಂಘದಿಂದ ಮುರುಘಮಠಕ್ಕೆ ಕ್ವೀಂಟಲ್ ಬೆಲ್ಲ ಪ್ರಸಾದ

    ಶ್ರೀ ಮಧತನಿ ಮುರುಗೇಂದ್ರ ಮಹಾಶಿವಯೋಗಿಗಳ ಜಾತ್ರಾಮಹೋತ್ಸವದ ಅಂಗವಾಗಿ ಧಾರವಾಡದ ಮೃತ್ಯುಂಜಯ ಮಾರುಕಟ್ಟೆಯ ಹಮಾಲರ ಸಂಘದಿಂದ, ಹಣ್ಣೊಂದು ಕ್ವೀಂಟಲ್ ಬೆಲ್ಲವನ್ನು ಪ್ರಸಾದಕ್ಕೆ ನೀಡಿದರು. ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮುಖಾಂತರ ಎ ಪಿ ಎಮ್ ಸಿ ಇಂದ ಶ್ರೀ ಮುರುಘಮಠಕ್ಕೆ ನೀಡಿದರು. ಈ ಸಂದರ್ಭದಲ್ಲಿ…

    ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವಾರ್ಷಿಕ ಸಾಮಾನ್ಯ ಸಭೆ

    ಧಾರವಾಡ 01: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಧಾರವಾಡ ಶಾಖೆಯ 2024 2025 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯನ್ನು ಮಂಗಳವಾರ, ದಿ 04 ರಂದು ಮುಂಜಾನೆ 10:30 ಗಂಟೆಗೆ ಕನ್ನಡ ಕುಲಪುರೋಹಿತ ಆಲೂರು ವಂಕಟರಾವ ಸಾಂಸ್ಕೃತಿಕ ಭವನದಲ್ಲಿ  ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ…

    RSS
    Follow by Email
    Telegram
    WhatsApp
    URL has been copied successfully!